ಭರವಸೆಯ ಬಜೆಟ್: ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ 2023-24ನೇ ವಿತ್ತೀಯ ವರ್ಷದ ಬಜೆಟ್ ದೇಶದ ಜನತೆಯ ಭರವಸೆಯ ಬಜೆಟ್ ಆಗಿದೆ ಎಂದು ಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಬುಧವಾರ ಹೇಳಿದ್ದಾರೆ.
ಹಣಕಾಸು ರಾಜ್ಯ ಸಚಿವ ಪಂಕಜ್ ಚೌದರಿ
ಹಣಕಾಸು ರಾಜ್ಯ ಸಚಿವ ಪಂಕಜ್ ಚೌದರಿ
Updated on

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ 2023-24ನೇ ವಿತ್ತೀಯ ವರ್ಷದ ಬಜೆಟ್ ದೇಶದ ಜನತೆಯ ಭರವಸೆಯ ಬಜೆಟ್ ಆಗಿದೆ ಎಂದು ಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಬುಧವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಸಂಸತ್ ಭವನದ ಆವರಣದಲ್ಲಿ ಮಾತನಾಡಿದ ಅವರು, 'ಈ ಬಜೆಟ್ ಸಾರ್ವಜನಿಕರ ನಿರೀಕ್ಷೆಗಳಿಗೆ ಸರಿಹೊಂದುತ್ತದೆ ಮತ್ತು ಭಾರತದ ಆರ್ಥಿಕತೆ ಹಾದಿಯಲ್ಲಿದೆ.  ಮೋದಿ ಸರ್ಕಾರ ರಚನೆಯಾದಾಗಿನಿಂದ ಇದು ಸಮಾಜದ ಎಲ್ಲಾ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಅನ್ನು ತರುತ್ತಿದೆ" ಎಂದು ಹೇಳಿದರು.

ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಬಜೆಟ್ ಕುರಿತು ಸಾಕಷ್ಟು ನಿರೀಕ್ಷೆಗಳಿದ್ದು, ಈ ಬಗ್ಗೆ ಈ ಬಾರಿ ಮಧ್ಯಮ ವರ್ಗಕ್ಕೆ ಸೇರಿದ ಜನರಿಗೆ ತೆರಿಗೆ ಸ್ಲ್ಯಾಬ್ ಅಥವಾ ಪರಿಹಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಚೌಧರಿ, "ಇದು ಕೆಲವೇ ಗಂಟೆಗಳ ವಿಷಯವಾಗಿದೆ, ಖಂಡಿತವಾಗಿಯೂ ಈ ಬಜೆಟ್ ಪ್ರತಿಯೊಬ್ಬರ ನಿರೀಕ್ಷೆಗಳನ್ನು ಪೂರೈಸುತ್ತದೆ. ಬಜೆಟ್ ಅಧಿವೇಶನದ ಉದ್ಘಾಟನಾ ದಿನದಂದು ಸಂಸತ್ತಿನಲ್ಲಿ ಮಂಡಿಸಲಾದ ಆರ್ಥಿಕ ಸಮೀಕ್ಷೆ 2022-23 ಅನ್ನು ಉಲ್ಲೇಖಿಸಿದ ಚೌಧರಿ, ಭಾರತದ ಆರ್ಥಿಕತೆಯು ಹಾದಿಯಲ್ಲಿದೆ ಎಂದು ಹೇಳಿದರು.

ಇದಕ್ಕೂ ಮುನ್ನ, ಸಂದರ್ಶನದಲ್ಲಿ ಮಾತನಾಡಿದ ಪಂಕಜ್ ಚೌಧರಿ ಅವರು 2024 ರ ಲೋಕಸಭೆ ಚುನಾವಣೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗುವುದೇ ಎಂಬ ಪ್ರಶ್ನೆಗಳಿಗೆ ಉತ್ತರಿಸಿದರು. "ಚುನಾವಣೆಗಳು ಬರುತ್ತಲೇ ಇರುತ್ತವೆ," 2023-24ರ ಕೇಂದ್ರ ಬಜೆಟ್ ಜನರ ಆರ್ಥಿಕ ಪರಿಸ್ಥಿತಿಗಳನ್ನು ಸುಧಾರಿಸುವತ್ತ ಗಮನ ಹರಿಸಲಿದೆ. "ಪ್ರಧಾನಿ ಮೋದಿಯವರ ಗಮನ ಯಾವಾಗಲೂ ಇರುತ್ತದೆ ಮತ್ತು ಅದನ್ನು ಈ ಬಜೆಟ್‌ನಲ್ಲಿಯೂ ಕಾಣಬಹುದು" ಎಂದು ಅವರು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com