ತಮಿಳುನಾಡು: ಅಕಾಲಿಕ ಮಳೆ, ನಾಗಪಟ್ಟಣಂನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ  ಅಕಾಲಿಕ ಮಳೆ ಸುರಿಯುತ್ತಿದ್ದು, ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. 
ಭಾರೀ ಮಳೆಯಿಂದಾಗಿ ಬಸ್ ನಿಲ್ದಾಣದಲ್ಲಿ ನಿಂತಿರುವ ಬಸ್ ಗಳು
ಭಾರೀ ಮಳೆಯಿಂದಾಗಿ ಬಸ್ ನಿಲ್ದಾಣದಲ್ಲಿ ನಿಂತಿರುವ ಬಸ್ ಗಳು
Updated on

ನಾಗಪಟ್ಟಣಂ: ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ  ಅಕಾಲಿಕ ಮಳೆ ಸುರಿಯುತ್ತಿದ್ದು, ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. 

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಶ್ರೀಲಂಕಾ ಕರಾವಳಿಯಿಂದ ಸುಮಾರು 80 ಕಿಮೀ  ಮತ್ತು ತಮಿಳುನಾಡಿನ ಕಾರೈಕಲ್‌ನಿಂದ 400 ಕಿಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.  

ಇದರಿಂದಾಗಿ ನಾಗಪಟ್ಟಣಂ, ಮೈಲಾಡುತುರೈ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬಸ್ ಗಳು ನಿಲ್ದಾಣದಲ್ಲಿಯೇ ನಿಂತಿದ್ದು, ಸಂಪರ್ಕ ಕಡಿತಗೊಂಡಿದ್ದು, ಒಂದು ದಿನದ ಮಟ್ಟಿಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ವಾಯುಭಾರ ಕುಸಿತದಿಂದಾಗಿ ಇಂದು  ದಕ್ಷಿಣ ತಮಿಳುನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮತ್ತು ನಾಳೆ ಸಮುದ್ರದಲ್ಲಿ ಬಿರುಗಾಳಿ ಹೆಚ್ಚಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com