ಗಾಂಧಿ ಕುಟುಂಬಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಶಾಶ್ವತ ಸ್ಥಾನ? ಪಕ್ಷದ ಸಂವಿಧಾನ ತಿದ್ದುಪಡಿ ಸಮಿತಿಯಲ್ಲಿ ಚರ್ಚೆ

ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್. ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (CWC) ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಶಾಶ್ವತ ಸ್ಥಾನ ನೀಡಲು ಕಾಂಗ್ರೆಸ್ ತನ್ನ ಸಂವಿಧಾನವನ್ನು ತಿದ್ದುಪಡಿ ಮಾಡಬಹುದು ಎಂದು ಮೂಲಗಳು ಹೇಳುತ್ತಿವೆ. 
ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ,ರಾಹುಲ್ ಗಾಂಧಿ(ಸಂಗ್ರಹ ಚಿತ್ರ)
ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ,ರಾಹುಲ್ ಗಾಂಧಿ(ಸಂಗ್ರಹ ಚಿತ್ರ)
Updated on

ನವದೆಹಲಿ: ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್. ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (CWC) ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಶಾಶ್ವತ ಸ್ಥಾನ ನೀಡಲು ಕಾಂಗ್ರೆಸ್ ತನ್ನ ಸಂವಿಧಾನವನ್ನು ತಿದ್ದುಪಡಿ ಮಾಡಬಹುದು ಎಂದು ಮೂಲಗಳು ಹೇಳುತ್ತಿವೆ. 

ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ ಅಧ್ಯಕ್ಷತೆಯಲ್ಲಿ ನಿನ್ನೆ ದೆಹಲಿಯಲ್ಲಿ ನಡೆದ ಪಕ್ಷದ ಸಂವಿಧಾನ ತಿದ್ದುಪಡಿ ಸಮಿತಿಯಲ್ಲಿ ಈ ವಿಷಯ ಚರ್ಚೆಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ರಣದೀಪ್ ಸಿಂಗ್ ಸುರ್ಜೆವಾಲಾ, ಕೆಸಿ ವೇಣುಗೋಪಾಲ್, ಮುಕುಲ್ ವಾಸ್ನಿಕ್, ಅಜಯ್ ಮಾಕನ್, ಜಿತೇಂದ್ರ ಸಿಂಗ್, ಅಭಿಷೇಕ್ ಮನು ಸಿಂಘ್ವಿ, ಮೋಹನ್ ಪ್ರಕಾಶ್, ದೀಪಾ ದಾಸ್ಮುನ್ಶಿ ಮತ್ತು ಜಿ ಪರಮೇಶ್ವರ ಅವರನ್ನೊಳಗೊಂಡ ಸಮಿತಿಯು ಸೋನಿಯಾ ಗಾಂಧಿ ಜೊತೆಗೆ ಮಾಜಿ ಪ್ರಧಾನಿಗಳಿಗೆ ಸಿಡಬ್ಲ್ಯುಸಿ ಕಾಯಂ ಸ್ಥಾನ ನೀಡುವ ಬಗ್ಗೆಯೂ ಚರ್ಚಿಸಿದೆ. 

ಮೂಲಗಳ ಪ್ರಕಾರ, ಈ ಪ್ರಸ್ತಾಪವನ್ನು ಅಂಗೀಕರಿಸಿದರೆ, ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶಾಶ್ವತ ಸ್ಥಾನಮಾನಗಳು ಸಿಗುತ್ತವೆ. ಫೆಬ್ರವರಿ 24-26 ರಂದು ನಡೆಯಲಿರುವ ರಾಯ್‌ಪುರ ಪ್ಲೆನರಿಯಲ್ಲಿ ಸಿಡಬ್ಲ್ಯಸಿ ಚುನಾವಣೆ ನಡೆಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಪಕ್ಷವು ಚರ್ಚೆ ನಡೆಸುತ್ತಿದೆ.

ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ-ವಾದ್ರಾ ಅವರು ಸ್ಪರ್ಧಿಸಬೇಕೇ ಅಥವಾ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಸೂಚಿಸಬೇಕೇ ಎಂಬ ಪ್ರಶ್ನೆ ಪಕ್ಷದ ವರಿಷ್ಠರಲ್ಲಿ ಚರ್ಚೆಯ ಕೇಂದ್ರವಾಗಿದೆ. ಪಕ್ಷದ ಸಂವಿಧಾನದ ಪ್ರಕಾರ, ಸಿಡಬ್ಲ್ಯುಸಿಯ 24 ಸದಸ್ಯರಲ್ಲಿ ಅರ್ಧದಷ್ಟು ಸದಸ್ಯರು ಚುನಾಯಿತರಾಗಿದ್ದರೆ, ಉಳಿದವರು ಪ್ರತಿನಿಧಿಸದ ವರ್ಗಗಳಿಗೆ ಪ್ರಾತಿನಿಧ್ಯವನ್ನು ನೀಡಲು ಪಕ್ಷದ ಅಧ್ಯಕ್ಷರಿಂದ ನಾಮನಿರ್ದೇಶನ ಮಾಡುತ್ತಾರೆ.

CWC ಯ ಸದಸ್ಯರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಸುಮಾರು 1,400 ಸದಸ್ಯರು ಆಯ್ಕೆ ಮಾಡುತ್ತಾರೆ. ಸಾಮಾನ್ಯವಾಗಿ ಎಐಸಿಸಿ ಸದಸ್ಯರಿಗೆ CWC ಮತದಾನದ ಬಗ್ಗೆ ಚುನಾವಣಾ ದಿನಾಂಕಕ್ಕಿಂತ ಕನಿಷ್ಠ ಒಂದು ತಿಂಗಳ ಮೊದಲು ತಿಳಿಸಲಾಗುತ್ತದೆ. ಆದರೆ ಹದಿನೈದು ದಿನಗಳಿಗಿಂತ ಕಡಿಮೆ ಸಮಯ ಬಾಕಿ ಉಳಿದಿದ್ದು, ಮತದಾನದ ಬಗ್ಗೆ ಮತದಾರರಿಗೆ ಇನ್ನೂ ಮಾಹಿತಿ ನೀಡಲಾಗಿಲ್ಲ.

ಗಾಂಧಿ ಕುಟುಂಬವನ್ನು ಸಿಡಬ್ಲ್ಯುಸಿಗೆ ಹೇಗೆ ಸೇರಿಸುವುದು ಎಂಬ ಸಂದಿಗ್ಧತೆಯಿಂದಾಗಿ ವಿಳಂಬವಾಗಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಮಾಜಿ ಅಧ್ಯಕ್ಷರು ಮತ್ತು ಪ್ರಧಾನ ಮಂತ್ರಿಗಳಿಗೆ ಶಾಶ್ವತ ಸ್ಥಾನ ನೀಡುವ ಸಂವಿಧಾನ ತಿದ್ದುಪಡಿ ಸಮಿತಿಯ ನಿರ್ಧಾರವು ಸಿಡಬ್ಲ್ಯುಸಿಯಲ್ಲಿ  ಸೇರ್ಪಡೆಯ ಬಗ್ಗೆ ಸ್ಪಷ್ಟತೆ ತರುವುದಲ್ಲದೆ, ಉನ್ನತ ಸಂಸ್ಥೆಗೆ ಚುನಾವಣೆಯನ್ನು ಸುಗಮವಾಗಿ ನಡೆಸಲು ದಾರಿ ಮಾಡಿಕೊಡುತ್ತದೆ ಎಂದು ಅವರು ಹೇಳಿದರು.

ಪ್ರಿಯಾಂಕಾ ಸ್ಪರ್ಧೆ?
ಸಿಡಬ್ಲ್ಯುಸಿ ಸದಸ್ಯೆ ಪ್ರಿಯಾಂಕಾ ಅವರು ಸಮಿತಿಗೆ ಸ್ಪರ್ಧಿಸುತ್ತಿದ್ದಾರೆಯೇ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಬಯಸುವುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ. ಆದ್ದರಿಂದ, ರಾಯ್‌ಪುರ್ ಪ್ಲೆನರಿಯು ಸಿಡಬ್ಲ್ಯುಸಿ ಸ್ಥಾನಕ್ಕಾಗಿ ಹೆಚ್ಚಿನ ಸಂಖ್ಯೆಯ ಪ್ರಮುಖ ನಾಯಕರು ಸ್ಪರ್ಧಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com