ಮುಂಬೈ: ತಾಂತ್ರಿಕ ದೋಷದಿಂದಾಗಿ ಸ್ಪೈಸ್ ಜೆಟ್ ವಿಮಾನವೊಂದು ಶನಿವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ವರ್ಶ ಮಾಡಿದೆ.
ಮುಂಬೈಯಿಂದ ಕಾಂಡ್ಲಾಕ್ಕೆ ತೆರಳುತ್ತಿದ್ದ ಸ್ಪೈಸ್ ಜೆಟ್ ಕ್ಯೂ 4000 ವಿಮಾನ ಭೂ ಸ್ಪರ್ಶ ಮಾಡಿದೆ. ಆದಾಗ್ಯೂ, ಟೇಕಾಪ್ ಆದ ಕ್ಷಣ ಕ್ಯಾಬಿನ್ ನಲ್ಲಿದ್ದವರು ಎಚ್ಚರಿಕೆ ನೀಡಿದ ನಂತರ ಪೈಲಟ್ ಮುಂಬೈಗೆ ವಿಮಾನ ಹಿಂತಿರುಗಿಸಲು ನಿರ್ಧರಿಸಿದ್ದಾರೆ. ಪರಿಸ್ಥಿತಿ ಬಗ್ಗೆ ಏರ್ ಟ್ರಾಫಿಕ್ ಕಂಟ್ರೋಲರ್ ಅವರಿಗೆ ಮಾಹಿತಿ ನೀಡಲಾಯಿತು ಎಂದು ಸ್ಪೈಸ್ ಜೆಟ್ ವಕ್ತಾರರೊಬ್ಬರು ತಿಳಿಸಿದ್ದಾರೆ.
ಮುಂಬೈ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ವಿಮಾನ ಲ್ಯಾಂಡ್ ಆಗಿದೆ. ಎಲ್ಲಾ ಪ್ರಯಾಣಿಕರು ಹಾಗೂ ವಿಮಾನದ ಸಿಬ್ಬಂದಿ ಸುರಕ್ಷಿತರಾಗಿರುವುದಾಗಿ ತಿಳಿದುಬಂದಿದೆ. ಮುಂಬೈ- ತಿರುಪತಿ ವಿಮಾನ ರದ್ದುಪಡಿಸಿಲ್ಲ, ನಿರ್ಗಮನದ ವೇಳೆಯನ್ನು ಮಾತ್ರ ಪರಿಷ್ಕರಿಸಲಾಗಿದೆ ಎಂದು ಸ್ಪೈಸ್ ಜೆಟ್ ವಕ್ತಾರರು ತಿಳಿಸಿದ್ದಾರೆ.
Advertisement