ಪಾಕಿಸ್ತಾನ: ರಾವಲ್ಪಿಂಡಿಯಲ್ಲಿ ಕಾಶ್ಮೀರದ ಹಿಜ್ಬುಲ್ ಕಮಾಂಡರ್ ಗುಂಡಿಕ್ಕಿ ಹತ್ಯೆ 

ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್‌ನ ಸ್ವಯಂಘೋಷಿತ ಕಮಾಂಡರ್ ಬಶೀರ್ ಅಹ್ಮದ್ ಪೀರ್ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್‌ನ ಸ್ವಯಂಘೋಷಿತ ಕಮಾಂಡರ್ ಬಶೀರ್ ಅಹ್ಮದ್ ಪೀರ್ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯವರಾದ ಪೀರ್, 15 ವರ್ಷಗಳಿಂದ ಪಾಕಿಸ್ತಾನದಲ್ಲಿ ನೆಲೆಸಿದ್ದರು ಎಂದು ಗುಪ್ತಚರ ಅಧಿಕಾರಿಗಳು ತಿಳಿಸಿದ್ದಾರೆ. ಪೀರ್ ಅಲಿಯಾಸ್ ಇಮ್ತಿಯಾಜ್ ಆಲಂ ಅವರನ್ನು ಸೋಮವಾರ ರಾವಲ್ಪಿಂಡಿಯ ಅಂಗಡಿಯೊಂದರ ಹೊರಗೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ಪಾಕ್ ಮಾಧ್ಯಮಗಳು ವರದಿ ಮಾಡಿವೆ. 

ಗಡಿ ನಿಯಂತ್ರಣ ರೇಖೆ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಭಯೋತ್ಪಾದಕರನ್ನು ಕಳುಹಿಸುವ  ಉಸ್ತುವಾರಿ ವಹಿಸಿದ್ದ ಪೀರ್, ಭಯೋತ್ಪಾದಕ ಚಟುವಟಿಕೆಗಳಲ್ಲಿ ವಹಿಸಿದ್ದ ಪಾತ್ರಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಕಳೆದ ವರ್ಷ ಅಕ್ಟೋಬರ್ 4 ರಂದು ಆತನನ್ನು ಕೇಂದ್ರ ಸರ್ಕಾರ ಭಯೋತ್ಪಾದಕ ಎಂದು ಹೆಸರಿಸಿತ್ತು. 

ಹಿಜ್ಬುಲ್ ಮುಜಾಹಿದ್ದೀನ್, ಲಷ್ಕರ್-ಎ-ತೈಬಾ ಮತ್ತು ಇತರ ಭಯೋತ್ಪಾದಕ ಸಂಘಟನೆಗಳ ಚಟುವಟಿಕೆಗಳ ವಿಸ್ತರಣೆಗಾಗಿ ಮಾಜಿ ಉಗ್ರಗಾಮಿಗಳು ಮತ್ತು ಇತರ ಕಾರ್ಯಕರ್ತರನ್ನು ಒಗ್ಗೂಡಿಸಲು ಪೀರ್ ಹಲವಾರು ಆನ್‌ಲೈನ್ ಪ್ರಚಾರ ಗುಂಪುಗಳಲ್ಲಿ ಭಾಗವಹಿಸಿರುವುದಾಗಿ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com