ಇಲಿ ಪಾಷಾನ ಸೇವಿಸಿ ಅಂಜುಶ್ರೀ ಸಾವು? ಪ್ರಾಥಮಿಕ ಶವಪರೀಕ್ಷೆ ವರದಿಯಲ್ಲಿ ಆತ್ಮಹತ್ಯೆಯ ಸುಳಿವು!

'ಕುಳಿಮಂತಿ' ಬಿರಿಯಾನಿ ತಿಂದು ಕಾಸರಗೋಡಿನ ತಳಕಳಾಯಿಯ 19 ವರ್ಷದ ಅಂಜುಶ್ರೀ ಪಾರ್ವತಿ ಮೃತಪಟ್ಟಿದ್ದಾಳೆ ಎಂಬ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಆಕೆ ಆತ್ಮಹತ್ಯೆಗೆ ಮಾಡಿಕೊಂಡಿರುವ ಸಾಧ್ಯತೆಗಳಿವೆ ಎಂಬುದು ಪ್ರಾಥಮಿಕ ಮರಣೋತ್ತರ ಪರೀಕ್ಷೆ ವರದಿ ಬಹಿರಂಗಗೊಂಡಿದೆ. 
ಅಂಜುಶ್ರೀ
ಅಂಜುಶ್ರೀ
Updated on

ಕಾಸರಗೋಡು: 'ಕುಳಿಮಂತಿ' ಬಿರಿಯಾನಿ ತಿಂದು ಕಾಸರಗೋಡಿನ ತಳಕಳಾಯಿಯ 19 ವರ್ಷದ ಅಂಜುಶ್ರೀ ಪಾರ್ವತಿ ಮೃತಪಟ್ಟಿದ್ದಾಳೆ ಎಂಬ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಆಕೆ ಆತ್ಮಹತ್ಯೆಗೆ ಮಾಡಿಕೊಂಡಿರುವ ಸಾಧ್ಯತೆಗಳಿವೆ ಎಂಬುದು ಪ್ರಾಥಮಿಕ ಮರಣೋತ್ತರ ಪರೀಕ್ಷೆ ವರದಿ ಬಹಿರಂಗಗೊಂಡಿದೆ. 

ವರದಿಯನ್ನು ಸಿದ್ಧಪಡಿಸಿದ ಪರಿಯಾರಂನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಆಕೆಯ ಸಾವು ಆಹಾರ ವಿಷದಿಂದ ಸಂಭವಿಸಿಲ್ಲ. ಇಲಿ ಪಾಷಾನ ಪೇಸ್ಟ್ ಬಾಲಕಿಯ ಯಕೃತ್ತಿನ ಮೇಲೆ ಪರಿಣಾಮ ಬೀರಿದ್ದು, ಆಕೆಯ ಸಾವಿಗೆ ಕಾರಣವಾಯಿತು ಎಂದು ತಿಳಿಸಿದ್ದಾರೆ.

ರಾಸಾಯನಿಕ ಪರೀಕ್ಷೆಯ ಫಲಿತಾಂಶ ಬಂದ ನಂತರವೇ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯ. ಆತ್ಮಹತ್ಯೆಯ ಸಾಧ್ಯತೆಯ ಸುಳಿವು ನೀಡಿದ ಡಿಜಿಟಲ್ ಮತ್ತು ಸಾಕ್ಷ್ಯಚಿತ್ರ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಆತ್ಮಹತ್ಯೆಯ ಸಾಧ್ಯತೆಯನ್ನು ಕುಟುಂಬಸ್ಥರು ತಳ್ಳಿಹಾಕಿದ್ದರೂ, ಅಂಜುಶ್ರೀ ಇತ್ತೀಚೆಗೆ ಇಲಿ ಪಾಷಾನಕ್ಕಾಗಿ ಹುಡುಕಾಟ ನಡೆಸಿದ್ದಾಳೆ ಎಂದು ಅವರ ಫೋನ್ ಇತಿಹಾಸ ತೋರಿಸುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿ ಆಧರಿಸಿ ಪೊಲೀಸರು ವಿಸ್ತೃತ ತನಿಖೆ ಆರಂಭಿಸಿದ್ದಾರೆ. ಸೈಬರ್ ಸೆಲ್ ಬೆಂಬಲದೊಂದಿಗೆ ಅಂಜುಶ್ರೀ ಅವರ ಮೊಬೈಲ್ ಫೋನ್ ಪರಿಶೀಲಿಸಿದ್ದಾರೆ. ಸಾವಿಗೆ ನಿಖರವಾದ ಕಾರಣವನ್ನು ಖಚಿತಪಡಿಸಲು ಪೊಲೀಸರು ರಾಸಾಯನಿಕ ಪರೀಕ್ಷೆಯ ಫಲಿತಾಂಶಗಳನ್ನು ಮತ್ತು ಆಂತರಿಕ ಅಂಗಗಳಿಂದ ಸಂಗ್ರಹಿಸಲಾದ ಮಾದರಿಗಳನ್ನು ನಿರೀಕ್ಷಿಸುತ್ತಿದ್ದಾರೆ.

ಡಿಸೆಂಬರ್ 31ರಂದು ಅಂಜುಶ್ರೀ ಮತ್ತು ಅವರ ಕುಟುಂಬ ಸದಸ್ಯರು ಕಾಸರಗೋಡಿನ ರೆಸ್ಟೋರೆಂಟ್‌ನಲ್ಲಿ 'ಕುಜಿಮಂತಿ' ಮತ್ತು ಚಿಕನ್ 65 ಅನ್ನು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದರು. ಆದರೆ, ಆಕೆಗೆ ತೊಂದರೆ ಕಾಣಿಸಿಕೊಂಡು ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಸ್ಥಿತಿ ಹದಗೆಟ್ಟ ನಂತರ, ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅಲ್ಲಿ ಆಕೆ ಶನಿವಾರ ಬೆಳಿಗ್ಗೆ 5.15ರ ಸುಮಾರಿಗೆ ಮೃತಪಟ್ಟಿದ್ದಳು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com