ಮುಳುಗುತ್ತಿದೆ ಜೋಶಿಮಠ: ತುರ್ತು ಅರ್ಜಿ ಪರಿಶೀಲನೆಗೆ ಸುಪ್ರೀಂಕೋರ್ಟ್ ನಕಾರ

ಇತಿಹಾಸ ಪ್ರಸಿದ್ಧ ಉತ್ತರಾಖಂಡ್​​ನ ಜೋಶಿಮಠ ಅಳವಿನಂಚಿಗೆ ತಲುಪುತ್ತಿದ್ದು, ಈ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತುರ್ತು ಪರಿಶೀಲನೆ ನಡೆಸಲು ಸುಪ್ರೀಕೋರ್ಟ್ ಮಂಗಳವಾರ ನಿರಾಕರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಇತಿಹಾಸ ಪ್ರಸಿದ್ಧ ಉತ್ತರಾಖಂಡ್​​ನ ಜೋಶಿಮಠ ಅಳವಿನಂಚಿಗೆ ತಲುಪುತ್ತಿದ್ದು, ಈ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತುರ್ತು ಪರಿಶೀಲನೆ ನಡೆಸಲು ಸುಪ್ರೀಕೋರ್ಟ್ ಮಂಗಳವಾರ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಪಿಎಸ್ ನರಸಿಂಹ ಅವರಿದ್ದ ಪೀಠವು, ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸಂಸ್ಥೆಗಳಿವೆ ಎಂದು ಹೇಳಿದ್ದು, ಜನವರಿ 16ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಮುಖ್ಯವಾದ ಎಲ್ಲವೂ ಸುಪ್ರೀಂಕೋರ್ಟ್‌ ಅಂಗಳಕ್ಕೆ ಬರಬೇಕಾಗಿಲ್ಲ. ಈ ಸಮಸ್ಯೆಯನ್ನು ನಿರ್ವಹಿಸಲು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸಂಸ್ಥೆಗಳಿವೆ ಎಂದು ಪೀಠ ಹೇಳಿದೆ.

ಈ ಹಿಂದೆ ಆದೇಶ ನೀಡಿದ್ದ ಸುಪ್ರೀಂಕೋರ್ಟ್, ಜೋಶಿಮಠದಲ್ಲಿ ಉದ್ಭವಿಸಿರುವ ಆಪತ್ತನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ನ್ಯಾಯಾಲಯದ ಮಧ್ಯಪ್ರವೇಶ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮಂಗಳವಾರವೇ ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ನಮೂದಿಸಲು ಅರ್ಜಿದಾರರಿಗೆ ಸೂಚಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com