ರಾಮಚರಿತಮಾನಸ ವಿರುದ್ಧ ಅವಹೇಳನಕಾರಿ ಹೇಳಿಕೆ: ಶಿಕ್ಷಣ ಸಚಿವನ ವಿರುದ್ಧ ಬಿಹಾರ ಕೋರ್ಟ್ ನಲ್ಲಿ ದೂರು ದಾಖಲು!

ರಾಮಚರಿತಮಾನಸ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಹಾರ ಶಿಕ್ಷಣ ಸಚಿವ ಚಂದ್ರಶೇಖರ್ ಗೆ ಸಂಕಷ್ಟ ಎದುರಾಗಿದ್ದು, ಈ ಸಂಬಂಧ ಮುಜಾಫರ್‌ಪುರ, ಬೇಗುಸರಾಯ್ ಮತ್ತು ಇತರ ನ್ಯಾಯಾಲಯಗಳಲ್ಲಿ ದೂರು ದಾಖಲಾಗಿದೆ.
ಸಚಿವ ಚಂದ್ರಶೇಖರ್
ಸಚಿವ ಚಂದ್ರಶೇಖರ್
Updated on

ಪಾಟ್ನಾ: ರಾಮಚರಿತಮಾನಸ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಹಾರ ಶಿಕ್ಷಣ ಸಚಿವ ಚಂದ್ರಶೇಖರ್ ಗೆ ಸಂಕಷ್ಟ ಎದುರಾಗಿದ್ದು, ಈ ಸಂಬಂಧ ಮುಜಾಫರ್‌ಪುರ, ಬೇಗುಸರಾಯ್ ಮತ್ತು ಇತರ ನ್ಯಾಯಾಲಯಗಳಲ್ಲಿ ದೂರು ದಾಖಲಾಗಿದೆ.

ದೂರಿನಲ್ಲಿ ಆರ್‌ಜೆಡಿ ನಾಯಕ ಮತ್ತು ಬಿಹಾರ ಸಚಿವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ವಕೀಲರಾದ ಸುಧೀರ್ ಕುಮಾರ್ ಓಜಾ ಮತ್ತು ರಾಜೀವ್ ಕುಮಾರ್ ಅವರಲ್ಲದೆ, ಗರೀಬ್ ನಾಥ್ ದೇವಾಲಯದ ಮಹಂತ್ ಅಭಿಷೇಕ್ ಪಾಠಕ್ ಅವರು ಬಿಹಾರದ ಮುಜಾಫರ್‌ಪುರದ ನ್ಯಾಯಾಲಯದಲ್ಲಿ ಸಚಿವರ ವಿರುದ್ಧ ದೂರು ದಾಖಲಿಸಿದ್ದಾರೆ.

ಸಚಿವರು ಉದ್ದೇಶಪೂರ್ವಕವಾಗಿ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರಿನ ಪತ್ರದಲ್ಲಿ ಆರೋಪಿಸಲಾಗಿದೆ. ಇದಕ್ಕಾಗಿ ಪ್ರಾಸಿಕ್ಯೂಷನ್ ಕೋರಲಾಗಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 25ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ.

ಇಲ್ಲಿಯೂ ಬೇಗುಸರಾಯ್‌ನಲ್ಲಿ ವಕೀಲ ಅಮರೇಂದ್ರ ಕುಮಾರ್ ಅಮರ್ ಅವರು ಬಿಹಾರ ಶಿಕ್ಷಣ ಸಚಿವ ಚಂದ್ರಶೇಖರ್ ವಿರುದ್ಧ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಇದು ಧಾರ್ಮಿಕ ದ್ವೇಷವನ್ನು ಹರಡುವ ಹೇಳಿಕೆ ಎಂದು ವಕೀಲರು ದೂರು ಪತ್ರದಲ್ಲಿ ವಿವರಿಸಿದ್ದಾರೆ. ಶಿಕ್ಷಣ ಸಚಿವರ ಹೇಳಿಕೆ ಬೇಜವಾಬ್ದಾರಿ ಹೇಳಿಕೆಯಾಗಿದೆ ಎಂದು ಹೇಳಿದ್ದಾರೆ. ಇಂತಹ ಹೇಳಿಕೆ ಧಾರ್ಮಿಕ ದ್ವೇಷವನ್ನು ಹರಡುತ್ತದೆ. ಹಾಗಾಗಿ ಶಿಕ್ಷಣ ಸಚಿವರು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಚಂದ್ರಶೇಖರ್ ಅವರು ಕಳೆದ ಬುಧವಾರ ನಳಂದ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ರಾಮಚರಿತಮಾನಸ ಕುರಿತು ಪ್ರತಿಕ್ರಿಯಿಸಿದ್ದು, ಬಳಿಕ ಹಲವು ಸಂಘಟನೆಗಳು ಈ ಹೇಳಿಕೆಯನ್ನು ಖಂಡಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com