ಅಪಘಾತಗಳಿಗೆ ಉತ್ತಮ ರಸ್ತೆಗಳು ಪ್ರಮುಖ ಕಾರಣ: ಬಿಜೆಪಿ ಶಾಸಕ

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಮೆರಿಕಕ್ಕೆ ಹೋಗಿ ಅಮೆರಿಕದ ರಸ್ತೆಗಳಿಗಿಂತ ಮಧ್ಯಪ್ರದೇಶದ ರಸ್ತೆಗಳು ಉತ್ತಮವಾಗಿವೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಶಾಸಕರೊಬ್ಬರು ಉತ್ತಮ ರಸ್ತೆಗಳೇ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ.
ನಾರಾಯಣ ಪಟೇಲ್
ನಾರಾಯಣ ಪಟೇಲ್
Updated on

ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಮೆರಿಕಕ್ಕೆ ಹೋಗಿ ಅಮೆರಿಕದ ರಸ್ತೆಗಳಿಗಿಂತ ಮಧ್ಯಪ್ರದೇಶದ ರಸ್ತೆಗಳು ಉತ್ತಮವಾಗಿವೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಶಾಸಕರೊಬ್ಬರು ಉತ್ತಮ ರಸ್ತೆಗಳೇ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ. 

ಖಾಂಡ್ವಾದ ಮಂಧಾತಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನಾರಾಯಣ್ ಪಟೇಲ್, ಉತ್ತಮ ರಸ್ತೆಗಳಿಂದಾಗಿ ಜನರು ವೇಗವಾಗಿ ಓಡಿಸುತ್ತಾರೆ. ಅತಿವೇಗದಲ್ಲಿ ವಾಹನ ಚಲಾಯಿಸುವುದರಿಂದ ನಿಯಂತ್ರಣಕ್ಕೆ ಬಾರದೆ ಅಪಘಾತವಾಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೆ ಅಂತಹ ಅನುಭವ ತಮಗೂ ಆಗಿದೆ ಎಂದು ಹೇಳಿದರು.

ದೇಶದಲ್ಲಿ ಉತ್ತಮ ರಸ್ತೆಗಳಿವೆ ಬಿಜೆಪಿ ಶಾಸಕ ನಂಬುತ್ತಾರೆ. ಇದು ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ. ಇದರಿಂದ ಪ್ರತಿದಿನ ಅಪಘಾತಗಳು ಸಂಭವಿಸುತ್ತಿವೆ. ವಾಸ್ತವವಾಗಿ, ಕಳೆದ ಒಂದು ವಾರದಿಂದ ಖಾಂಡ್ವಾದಲ್ಲಿ ಅಪಘಾತಗಳ ಘಟನೆಗಳು ನಿರಂತರವಾಗಿ ಮುನ್ನೆಲೆಗೆ ಬರುತ್ತಿವೆ ಎಂದರು.

ಇತ್ತೀಚಿನ ದಿನಗಳಲ್ಲಿ ರಸ್ತೆಗಳು ಚೆನ್ನಾಗಿವೆ. ಅದರಲ್ಲೂ ನನ್ನ ಕ್ಷೇತ್ರದಲ್ಲಿ ಅನೇಕ ಅಪಘಾತಗಳು ಸಂಭವಿಸುತ್ತಿವೆ. ರಸ್ತೆಗಳು ಉತ್ತಮವಾಗಿವೆ, ವಾಹನಗಳು ಅತಿವೇಗದಲ್ಲಿ ಓಡುತ್ತವೆ, ಅತಿ ವೇಗದ ವಾಹನವು ಯಾವುದೇ ಸಮಯದಲ್ಲಿ ಅನಿಯಂತ್ರಿತವಾಗಬಹುದು ಎಂದು ನಾನು ಅನುಭವಿಸಿದ್ದೇನೆ. ಅದಕ್ಕಾಗಿಯೇ ಈ ರೀತಿಯ ಪರಿಸ್ಥಿತಿ ಉದ್ಭವಿಸುತ್ತದೆ. ಅಷ್ಟೇ ಅಲ್ಲ, ಕೆಲ ಚಾಲಕರು ಕುಡಿದ ಅಮಲಿನಲ್ಲಿ ವಾಹನಗಳನ್ನು ಓಡಿಸುತ್ತಾರೆಯೇ ಹೊರತು ಎಲ್ಲರೂ ಅಲ್ಲ. ಕುಡಿದ ಅಮಲಿನಲ್ಲಿ ವಾಹನಗಳನ್ನು ಓಡಿಸುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತವೆ ಎಂದರು.

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರದೇಶದ ರಸ್ತೆಗಳ ಸ್ಥಿತಿ ತುಂಬಾ ಕೆಟ್ಟದಾಗಿದೆ. ಇದರಿಂದ ಪ್ರತಿದಿನ ಅಪಘಾತಗಳು ಸಂಭವಿಸುತ್ತಿವೆ. ಜನವರಿ 1 ರಿಂದ ಖಾಂಡ್ವಾದಲ್ಲಿ ನಾಲ್ಕು ಪ್ರಮುಖ ಬಸ್ ಅಪಘಾತಗಳು ಸಂಭವಿಸಿವೆ. ಹೀಗಿದ್ದರೂ ಬಿಜೆಪಿ ಶಾಸಕರ ಈ ರೀತಿಯ ವಾದ ಅರ್ಥವಾಗುತ್ತಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com