ಮಧ್ಯ ಪ್ರದೇಶದ ಶಾಲೆಗಳಲ್ಲಿ ಭಗವದ್ಗೀತೆ, ರಾಮಾಯಣ, ಮಹಾಭಾರತ ಬೋಧನೆ

ಭಗವದ್ಗೀತೆ, ರಾಮಾಯಣ, ಮಹಾಭಾರತ ಮತ್ತು ಇತರ ಧಾರ್ಮಿಕ ಪುಸ್ತಕಗಳ ಆಯ್ದ ಭಾಗಗಳನ್ನು ರಾಜ್ಯದ ಶಾಲೆಗಳಲ್ಲಿ ಬೋಧಿಸಲಾಗುವುದು ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು...
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
Updated on

ಭೋಪಾಲ್‌: ಭಗವದ್ಗೀತೆ, ರಾಮಾಯಣ, ಮಹಾಭಾರತ ಮತ್ತು ಇತರ ಧಾರ್ಮಿಕ ಪುಸ್ತಕಗಳ ಆಯ್ದ ಭಾಗಗಳನ್ನು ರಾಜ್ಯದ ಶಾಲೆಗಳಲ್ಲಿ ಬೋಧಿಸಲಾಗುವುದು ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸೋಮವಾರ ಹೇಳಿದ್ದಾರೆ.

ಭೋಪಾಲ್‌ನ ಓಲ್ಡ್ ಕ್ಯಾಂಪಿಯನ್ ಮೈದಾನದಲ್ಲಿ ವಿದ್ಯಾಭಾರತಿ ಸಂಸ್ಥೆ ಆಯೋಜಿಸಿದ್ದ ಸುಘೋಷ್ ದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಚೌಹಾಣ್ ಈ ಘೋಷಣೆ ಮಾಡಿದರು.

ರಾಮಾಯಣ, ಮಹಾಭಾರತ, ವೇದಗಳು, ಉಪನಿಷತ್ತುಗಳು ಮತ್ತು ಶ್ರೀಮದ್ ಭಗವದ್ಗೀತೆಗಳು ನಮ್ಮ ಅಮೂಲ್ಯವಾದ ಪುಸ್ತಕಗಳಾಗಿವೆ. ಈ ಪುಸ್ತಕಗಳು ಮನುಷ್ಯನನ್ನು ನೈತಿಕವಾಗಿ ಮತ್ತು ಪರಿಪೂರ್ಣರನ್ನಾಗಿ ಮಾಡುವ ಸಾಮರ್ಥ್ಯ ಹೊಂದಿವೆ. ಆದ್ದರಿಂದ ನಮ್ಮ ಧಾರ್ಮಿಕ ಪುಸ್ತಕಗಳ ಬೋಧನೆಯನ್ನು ಸರ್ಕಾರಿ ಶಾಲೆಗಳಲ್ಲಿ ಅಳವಡಿಸಲಾಗುವುದು ಎಂದು ಚೌಹಾಣ್ ತಿಳಿಸಿದರು.

"ಶಾಲೆಗಳಲ್ಲಿ ಈ ಪವಿತ್ರ ಪುಸ್ತಕಗಳನ್ನು ಕಲಿಸುವ ಮೂಲಕ, ನಾವು ನಮ್ಮ ಮಕ್ಕಳನ್ನು ನೈತಿಕ ಮತ್ತು ಪರಿಪೂರ್ಣರನ್ನಾಗಿ ಮಾಡುತ್ತೇವೆ" ಎಂದು ಅವರು ಹೇಳಿದರು.

"ಶಿಕ್ಷಣವು ಮಾನವನನ್ನು ಮಾನವನನ್ನಾಗಿ ಮಾಡುವ ವಸ್ತುವಾಗಿದೆ. ನೈತಿಕ ಶಿಕ್ಷಣ ಮತ್ತು ಆಧ್ಯಾತ್ಮಿಕ ಶಿಕ್ಷಣ ಅಗತ್ಯ. ಸ್ವಾಮಿ ವಿವೇಕಾನಂದರು ನೈತಿಕ ಶಿಕ್ಷಣ ಅಗತ್ಯ ಎಂದು ಹೇಳಿದ್ದಾರೆ ಮತ್ತು ವಿದ್ಯಾಭಾರತಿ ಸಂಸ್ಥೆಯು ಈ ನೈತಿಕ ಶಿಕ್ಷಣವನ್ನು ನೀಡುತ್ತದೆ" ಎಂದು ಮಧ್ಯ ಪ್ರದೇಶ ಸಿಎಂ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com