ರವಿಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ

ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಸಂಸ್ಥಾಪಕ ಶ್ರೀ ರವಿ ಶಂಕರ್ ಗುರೂಜಿ ಇದ್ದ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ಈರೋಡ್'ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ರವಿಶಂಕರ್ ಗುರೂಜಿ.
ರವಿಶಂಕರ್ ಗುರೂಜಿ.
Updated on

ಚೆನ್ನೈ: ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಸಂಸ್ಥಾಪಕ ಶ್ರೀ ರವಿ ಶಂಕರ್ ಗುರೂಜಿ ಇದ್ದ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ಈರೋಡ್'ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ರವಿ ಶಂಕರ್ ಗುರೂಜಿ ಹಾಗೂ ಇತರ ಮೂವರಿದ್ದ ಹೆಲಿಕಾಪ್ಟರ್ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಬುಡಕಟ್ಟು ಕುಗ್ರಾಮ ಉಕಿನಿಯಂನಲ್ಲಿ ಬುಧವಾರ ತುರ್ತು ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.

ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ ಅನ್ನು ಪೈಲಟ್ ಸೇಫ್ ಆಗಿ ಲ್ಯಾಂಡ್ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.

ಹೆಲಿಕಾಪ್ಟರ್‌ನಲ್ಲಿ ಗುರೂಜಿ ಜೊತೆ ಇಬ್ಬರು ಆಪ್ತ ಸಹಾಯಕರು ಮತ್ತು ಒಬ್ಬ ಪೈಲಟ್ ಪ್ರಯಾಣಿಸುತ್ತಿದ್ದರು. ತಿರುಪುರದಿಂದ ಗುರೂಜಿ ಬೆಂಗಳೂರಿಗೆ ಖಾಸಗಿ ಹೆಲಿಕಾಪ್ಟರ್‌ನಲ್ಲಿ 10:30ರ ಸುಮಾರಿಗೆ ಹಾರಾಟ ಆರಂಭಿಸಿದ್ದರು.

ಹವಾಮಾನ ವೈಪರೀತ್ಯದಿಂದ ಪೈಲಟ್ ಹೆಲಿಕಾಪ್ಟರ್‌ನ್ನು ಉಕಿನಿಯಂನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ ಎಂದು ಕಡಂಬೂರು ಪೊಲೀಸ್ ಇನ್ಸ್‌ಪೆಕ್ಟರ್‌ ಸಿ.ವಡಿವೇಲ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.

ರವಿಶಂಕರ್ ಗುರೂಜಿಗಳು ಇಂದು 1000 ವರ್ಷಗಳಷ್ಟು ಹಳೆಯದಾದ ಪ್ರಹಲ್‌ನಾಯಕಿ ಅಂಬಿಗ ಸಮೇದ, ಕಬೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಬೇಕಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com