ಮಹದಾಯಿ ವಿಚಾರದಲ್ಲಿ ಗೋವಾ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ: ಗೋವಾ ಸಿಎಂ ಪ್ರಮೋದ್ ಸಾವಂತ್

ಮಹದಾಯಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಮತ್ತು ನದಿ ನೀರನ್ನು ಬೇರೆಡೆಗೆ ಹರಿಸದಂತೆ ರಕ್ಷಿಸಲು ತಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ.
ಪ್ರಮೋದ್ ಸಾವಂತ್
ಪ್ರಮೋದ್ ಸಾವಂತ್

ಪಣಜಿ: ಮಹದಾಯಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಮತ್ತು ನದಿ ನೀರನ್ನು ಬೇರೆಡೆಗೆ ಹರಿಸದಂತೆ ರಕ್ಷಿಸಲು ತಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ.

ನದಿ ನೀರು ಹಂಚಿಕೆ ವಿಚಾರದಲ್ಲಿ ಗೋವಾ ಮತ್ತು ನೆರೆಯ ಕರ್ನಾಟಕ ಹಲವು ವರ್ಷಗಳಿಂದ ಜಗಳವಾಡುತ್ತಿದೆ. ಕರ್ನಾಟಕವು ಒಪ್ಪಂದಗಳನ್ನು ನಿರ್ಲಕ್ಷಿಸಿ ಈ ವಿಷಯದಲ್ಲಿ ಏಕಪಕ್ಷೀಯವಾಗಿ ಮುಂದುವರಿಯುತ್ತಿದೆ ಎಂದು ಗೋವಾ ಆಗಾಗ್ಗೆ ಆರೋಪಿಸಿದೆ.
ಕರ್ನಾಟಕ ಮತ್ತು ಗೋವಾ ನಡುವಿನ ಮಹದಾಯಿ ನದಿ ನೀರಿನ ವಿವಾದವನ್ನು ಬಗೆಹರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಸಂಬಂಧಿಸಿದಂತೆ ಗೋವಾದಲ್ಲಿ ವಿರೋಧ ಪಕ್ಷಗಳು ಶನಿವಾರ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜೀನಾಮೆಗೆ ಒತ್ತಾಯಿಸಿವೆ.

ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾವಂತ್, ಗೋವಾ ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಬಲವಾದ ಕಾನೂನು ನಿಲುವನ್ನು ಹೊಂದಿದೆ. ಇದರಲ್ಲಿ ಯಾವುದೇ ರಾಜಿ ಇಲ್ಲ, ಮಹದಾಯಿ ನದಿ ನೀರನ್ನು ಬೇರೆಡೆಗೆ ಹರಿಸದಂತೆ ರಕ್ಷಿಸಲು ಸರಕಾರ ಶ್ರಮಿಸುತ್ತಿದೆ ಎಂದರು.

ಶನಿವಾರ ಕರ್ನಾಟಕದ ಬೆಳಗಾವಿಯಲ್ಲಿ ಭಾರತೀಯ ಜನತಾ ಪಕ್ಷದ ಜನಸಂಕಲ್ಪ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅಮಿತ್ ಶಾ, 'ಮಹದಾಯಿ ನದಿ ನೀರನ್ನು ಕರ್ನಾಟಕಕ್ಕೆ ಒದಗಿಸಲು ಕರ್ನಾಟಕ ಮತ್ತು ಗೋವಾ ನಡುವಿನ ದೀರ್ಘಕಾಲದ ವಿವಾದವನ್ನು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಸಮರ್ಥವಾಗಿದೆ ಎಂದು ನಾನು ನಿಮಗೆ (ಜನರಿಗೆ) ಹೇಳಲು ಬಯಸುತ್ತೇನೆ. ಮಹದಾಯಿ ನೀರನ್ನು ಕರ್ನಾಟಕಕ್ಕೆ ತಿರುಗಿಸುವ ಮೂಲಕ ಇಲ್ಲಿನ ಹಲವಾರು ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಈ ಹೇಳಿಕೆಗೆ ವಿರೋಧ ಪಕ್ಷಗಳು ಬಿಜೆಪಿ ನೇತೃತ್ವದ ಸರ್ಕಾರವನ್ನು ಟೀಕಿಸಿವೆ. ಕಾಂಗ್ರೆಸ್, ಗೋವಾ ಫಾರ್ವರ್ಡ್ ಪಾರ್ಟಿ, ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಈ ವಿಚಾರವಾಗಿ ಸಿಎಂ ಸಾವಂತ್ ರಾಜೀನಾಮೆಗೆ ಒತ್ತಾಯಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com