ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ(Mansoon session of Parliament) ಜುಲೈ 20ರಂದು ಆರಂಭವಾಗಲಿದೆ. ಜುಲೈ 20ರಂದು ಆರಂಭವಾಗುವ ಅಧಿವೇಶನ ಆಗಸ್ಟ್ 11ರವರೆಗೆ ಮುಂದುವರಿಯಲಿದೆ.
ಸಂಸತ್ತು ಕಲಾಪಗಳು ಸುಗಮವಾಗಿ, ಸರಾಗವಾಗಿ ಮತ್ತು ದೇಶದ ಜನರಿಗೆ ಉಪಯೋಗವಾಗುವಂತಹ ಚರ್ಚೆಗಳನ್ನು ಕಲಾಪ ವೇಳೆ ನಡೆಸಿಕೊಂಡು ಹೋಗಲು ಎಲ್ಲಾ ಪಕ್ಷಗಳ ಸದಸ್ಯರು ಸಹಕಾರ ನೀಡಬೇಕೆಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಮನವಿ ಮಾಡಿಕೊಂಡಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ನಡೆಸಲು ವಿರೋಧ ಪಕ್ಷಗಳು ಇತ್ತೀಚೆಗೆ ಸಭೆ ಸೇರಿ ನಿರ್ಧಾರ ತೆಗೆದುಕೊಂಡಿರುವುದರಿಂದ ಅಧಿವೇಶನವು ಈ ಬಾರಿ ಕುತೂಹಲದಿಂದ ಕೂಡಿದೆ.
ಇದರ ಜೊತೆಗೆ, ಏಕರೂಪ ನಾಗರಿಕ ಸಂಹಿತೆಗಾಗಿ ಪ್ರಧಾನಿ ಮೋದಿ ಅವರು ಬಲವಾಗಿ ಪ್ರದಿಪಾದಿಸಿರುವ ಸಂದರ್ಭದಲ್ಲಿ ಈ ವಿಷಯದ ಕುರಿತು ಸಮಾಲೋಚನೆಗಳನ್ನು ನಡೆಸುವ ಸಂದರ್ಭದಲ್ಲಿ ಸಂಸತ್ತು ಕಲಾಪ ನಡೆಯುತ್ತಿದೆ.
Advertisement