ಡಿಇಆರ್‌ಸಿ ಅಧ್ಯಕ್ಷರಾಗಿ ನ್ಯಾಯಮೂರ್ತಿ ಉಮೇಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಮುಂದೂಡಿಕೆ: ಸುಪ್ರೀಂ ಕೋರ್ಟ್

ಡಿಇಆರ್‌ಸಿ ಅಧ್ಯಕ್ಷ-ನಿಯೋಜಿತ ನ್ಯಾಯಮೂರ್ತಿ (ನಿವೃತ್ತ) ಉಮೇಶ್ ಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಸುಪ್ರೀಂ ಕೋರ್ಟ್ ಸೋಮವಾರ ಮುಂದೂಡಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ಡಿಇಆರ್‌ಸಿ ಅಧ್ಯಕ್ಷ-ನಿಯೋಜಿತ ನ್ಯಾಯಮೂರ್ತಿ (ನಿವೃತ್ತ) ಉಮೇಶ್ ಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಸುಪ್ರೀಂ ಕೋರ್ಟ್ ಸೋಮವಾರ ಮುಂದೂಡಿದೆ.

ದೆಹಲಿ ಸರ್ಕಾರದ ಮನವಿಯ ಮೇರೆಗೆ ನೇಮಕಾತಿ  ಸಂಬಂಧ ಕೇಂದ್ರ ಮತ್ತು ಲೆಫ್ಟಿನೆಂಟ್ ಗವರ್ನರ್ ಕಚೇರಿಯಿಂದ  ಸುಪ್ರೀಂಕೋರ್ಟ್ ಪ್ರತಿಕ್ರಿಯೆ ಕೇಳಿದೆ.

ಅಲಹಾಬಾದ್ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರಿಗೆ (ಡಿಇಆರ್‌ಸಿ ಅಧ್ಯಕ್ಷರಾಗಿ) ಪ್ರಮಾಣ ವಚನ ಬೋಧನೆಯನ್ನು ಮುಂದೂಡಲಾಗಿದೆ" ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠ ಹೇಳಿದೆ.

ನ್ಯಾಯಮೂರ್ತಿ ಕುಮಾರ್ ಅವರನ್ನು ಡಿಇಆರ್‌ಸಿ (ದೆಹಲಿ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ) ಅಧ್ಯಕ್ಷರನ್ನಾಗಿ ನೇಮಿಸಿ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯನ್ನು ಪ್ರಶ್ನಿಸಿದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಎಲ್‌ಜಿ ಕಚೇರಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಾಲಯವು ಈಗ ದೆಹಲಿ ಸರ್ಕಾರದ ಮನವಿಯನ್ನು ಜುಲೈ 11 ರಂದು ವಿಚಾರಣೆಗೆ ನಿಗದಿಪಡಿಸಿದೆ ಮತ್ತು ಅರ್ಜಿಗೆ ಒಂದು ದಿನ ಮುಂಚಿತವಾಗಿ ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಲು ಕೇಂದ್ರ ಮತ್ತು ಇತರರಿಗೆ ಸೂಚಿಸಿದೆ.

ಜುಲೈ 3 ರಂದು, ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಮೂರ್ತಿ ಕುಮಾರ್ ಅವರ ಪ್ರಮಾಣ ವಚನ ಸ್ವೀಕಾರದ ಪ್ರಕ್ರಿಯೆ ಪೂರ್ಣಗೊಳಿಸಲು ಸಲಹೆ ನೀಡಿದರು, ನಂತರ ವಿದ್ಯುತ್ ಸಚಿವ ಅತಿಶಿ ಅವರ ಅನಾರೋಗ್ಯ ದಿಂದಾಗಿ ಕಾರ್ಯಕ್ರಮವನ್ನು ಮುಂದೂಡಲಾಯಿತು. ಡಿಇಆರ್‌ಸಿ ಅಧ್ಯಕ್ಷರ ನೇಮಕವು ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಕಚೇರಿ ನಡುವೆ ಅಧಿಕಾರದ ಜಗಳಕ್ಕೆ ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com