ನನ್ನನ್ನು ವಜಾ ಮಾಡುವ ಅಧಿಕಾರ ಅಜಿತ್ ಪವಾರ್ ಬಣಕ್ಕೆ ಇಲ್ಲ: ಜಯಂತ್ ಪಾಟೀಲ್

ನನ್ನನ್ನು ಎನ್ ಸಿಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ತೆಗೆದುಹಾಕುವ ಅಧಿಕಾರ ಅಜಿತ್ ಪವಾರ್ ನೇತೃತ್ವದ ಬಂಡಾಯ ಬಣಕ್ಕೆ ಇಲ್ಲ ಎಂದು ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಮಂಗಳವಾರ ಹೇಳಿದ್ದಾರೆ. 
ಜಯಂತ್ ಪಾಟೀಲ್
ಜಯಂತ್ ಪಾಟೀಲ್

ಮುಂಬೈ: ನನ್ನನ್ನು ಎನ್ ಸಿಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ತೆಗೆದುಹಾಕುವ ಅಧಿಕಾರ ಅಜಿತ್ ಪವಾರ್ ನೇತೃತ್ವದ ಬಂಡಾಯ ಬಣಕ್ಕೆ ಇಲ್ಲ ಎಂದು ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಮಂಗಳವಾರ ಹೇಳಿದ್ದಾರೆ. 

ಎನ್‌ಸಿಪಿಯ ಎಲ್ಲಾ ಶಾಸಕರು(ಒಟ್ಟು 53) ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಇದ್ದಾರೆ ಎಂದು ಜಯಂತ್ ಪಾಟೀಲ್ ಅವರು ತಿಳಿಸಿದ್ದಾರೆ.

ನಿನ್ನೆ ಅಜಿತ್ ಪವಾರ್ ಬಣ, ಜಯಂತ್ ಪಾಟೀಲ್ ಅವರನ್ನು ವಜಾಗೊಳಿಸಿ, ಸುನೀಲ್ ತಟ್ಕರೆ ಅವರನ್ನು ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಅಲ್ಲದೆ ಜಯಂತ್ ಪಾಟೀಲ್ ಮತ್ತು ಜಿತೇಂದ್ರ ಅವ್ಹಾದ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ಮನವಿ ಮಾಡಿದೆ.

"ಅಜಿತ್ ಪವಾರ್ ನೇತೃತ್ವದ ಬಣ 'ಕಾಲ್ಪನಿಕ' ಪಕ್ಷವಾಗಿದೆ. ನನ್ನನ್ನು(ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ) ತೆಗೆದುಹಾಕಲು ಅವರಿಗೆ ಯಾವುದೇ ಅಧಿಕಾರ ಇಲ್ಲ" ಎಂದು ಜಯಂತ್ ಪಾಟೀಲ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾದ ಒಂಬತ್ತು ಶಾಸಕರ ವಿರುದ್ಧ ಕ್ರಮ ಕೈಗೊಂಡಿದ್ದೇನೆ. ಶರದ್ ಪವಾರ್ ನೇತೃತ್ವದ ಎನ್‌ಸಿಪಿಯು ಅಜಿತ್ ಪವಾರ್ ಮತ್ತು ಇತರ ಎಂಟು ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಮನವಿ ಸಲ್ಲಿಸಿದೆ ಎಂದು ಜಯಂತ್ ಪಾಟೀಲ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com