ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಸಮಯ ಬಂದಿದೆ: ಉಪ ರಾಷ್ಟ್ರಪತಿ ಧನಕರ್

ಸಂವಿಧಾನದ ಪಿತಾಮಹರ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರುವ ಸಮಯ ಈಗ ಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ.
ಜಗದೀಪ್ ಧನಕರ್
ಜಗದೀಪ್ ಧನಕರ್

ಗುವಾಹಟಿ: ಸಂವಿಧಾನದ ಪಿತಾಮಹರ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರುವ ಸಮಯ ಈಗ ಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ.

ಇಂದು ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 25ನೇ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದ ಧನಕರ್ ಅವರು, ಸಂವಿಧಾನದ 44ನೇ ವಿಧಿಯು ದೇಶಾದ್ಯಂತ ತನ್ನ ನಾಗರಿಕರ ಸುರಕ್ಷತೆ ಕಲ್ಪಿಸಲು ಯುಸಿಸಿಯ ಬಗ್ಗೆ ಸ್ಪಷ್ಟವಾಗಿ ಹೇಳುತ್ತದೆ ಎಂದರು.

"ಸಂವಿಧಾನದ ಪಿತಾಮಹರ ಆಲೋಚನಾ ಪ್ರಕ್ರಿಯೆಯಲ್ಲೂ ಯುಸಿಸಿಯ ಚಿಂತನೆಗಳಿದ್ದವು. ಹೀಗಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕಾಲ ಸನ್ನಿಹಿತವಾಗಿದೆ. ಇದಕ್ಕೆ ಅಡ್ಡಿ ಅಥವಾ ಮತ್ತಷ್ಟು ವಿಳಂಬಕ್ಕೆ ಯಾವುದೇ ಕಾರಣವಿಲ್ಲ" ಎಂದು ಅವರು ಹೇಳಿದರು.

"ಸಂವಿಧಾನವನ್ನು ಅನುಸರಿಸಿ, ಯುಸಿಸಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗ ಕೆಲವು ಜನರ ಪ್ರತಿಕ್ರಿಯೆ ನೋಡಿ ನಾನು ದಿಗ್ಭ್ರಮೆಗೊಂಡಿದ್ದೇನೆ. ರಾಜಕೀಯ ಹಿತಾಸಕ್ತಿಯು ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಮೇಲೆ ಪರಿಣಾಮ ಬೀರಲು ಸಾಧ್ಯವಿಲ್ಲ' ಎಂದು ಧನಕರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com