ವಕೀಲರ ನಡುವಿನ ವಾಗ್ವಾದ ನಡುವೆ ದೆಹಲಿಯ ತೀಸ್ ಹಜಾರಿ ನ್ಯಾಯಾಲಯದಲ್ಲಿ ಗುಂಡಿನ ದಾಳಿ, ವಿಡಿಯೋ ವೈರಲ್!

ದೆಹಲಿಯ ನ್ಯಾಯಾಲಯದಲ್ಲಿ ಮತ್ತೊಮ್ಮೆ ಗುಂಡಿನ ದಾಳಿಯ ಘಟನೆ ಮುನ್ನೆಲೆಗೆ ಬಂದಿದೆ. ವಕೀಲರ ನಡುವೆ ಪರಸ್ಪರ ವಾಗ್ವಾದ ಮತ್ತು ವಾಗ್ವಾದದ ನಂತರ ತಿಸ್ ಹಜಾರಿ ನ್ಯಾಯಾಲಯದಲ್ಲಿ ಗುಂಡಿನ ದಾಳಿ ನಡೆಯಿತು. 
ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ

ನವದೆಹಲಿ: ದೆಹಲಿಯ ನ್ಯಾಯಾಲಯದಲ್ಲಿ ಮತ್ತೊಮ್ಮೆ ಗುಂಡಿನ ದಾಳಿಯ ಘಟನೆ ಮುನ್ನೆಲೆಗೆ ಬಂದಿದೆ. ವಕೀಲರ ನಡುವೆ ಪರಸ್ಪರ ವಾಗ್ವಾದ ಮತ್ತು ವಾಗ್ವಾದದ ನಂತರ ತಿಸ್ ಹಜಾರಿ ನ್ಯಾಯಾಲಯದಲ್ಲಿ ಗುಂಡಿನ ದಾಳಿ ನಡೆಯಿತು. 

ಈ ಘಟನೆಯಲ್ಲಿ ಯಾರೂ ಗಾಯಗೊಂಡಿರುವ ಬಗ್ಗೆ ಯಾವುದೇ ಸುದ್ದಿ ಇಲ್ಲ. ಈ ಘಟನೆಯ ವಿಡಿಯೋ ಕೂಡ ಹೊರಬಿದ್ದಿದ್ದು, ಗಾಳಿಯಲ್ಲಿ ಗುಂಡು ಹಾರಿಸಿರುವುದು ಕಾಣಬಹುದಾಗಿದೆ. ಆದರೆ, ಉದ್ವಿಗ್ನತೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇಂದು ಮಧ್ಯಾಹ್ನ 1.35ರ ಸುಮಾರಿಗೆ ಸಬ್ಜಿ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದಾಗ, ಎರಡು ಗುಂಪುಗಳ ವಕೀಲರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಈಗ ಪರಿಸ್ಥಿತಿ ಸಹಜವಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ವಕೀಲರ ಸಂಘದ ಪದಾಧಿಕಾರಿಗಳೂ ಆಗಿರುವ ಇಬ್ಬರು ವಕೀಲರು ಗುಂಡಿನ ದಾಳಿಯ ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದ್ದಾರೆ. ಶೂಟರ್‌ಗಳ ಪೈಕಿ ಮನೀಷ್ ಶರ್ಮಾ ಅವರು ತೀಸ್ ಹಜಾರಿ ನ್ಯಾಯಾಲಯದ ವಕೀಲರ ಸಂಘದ ಉಪಾಧ್ಯಕ್ಷರಾಗಿದ್ದಾರೆ. ಇತರ ವಕೀಲರ ಹೆಸರು ತಿಳಿದುಬಂದಿಲ್ಲ.

ಆದರೆ ಗುಂಡು ಹಾರಿಸುವಾಗ ಇಬ್ಬರೂ ಸ್ಪಷ್ಟವಾಗಿ ಕಾಣುತ್ತಾರೆ. ಈ ಆಯುಧಗಳು ಪರವಾನಿಗೆಯಡಿ ಅವರ ಬಳಿ ಇವೆಯೇ ಅಥವಾ ಪರವಾನಿಗೆ ಇಲ್ಲದೆ ಬಂದೂಕುಗಳನ್ನು ತೆಗೆದುಕೊಂಡು ನ್ಯಾಯಾಲಯದ ಒಳಗೆ ವಕೀಲರು ತಿರುಗಾಡುತ್ತಿದ್ದಾರಾ ಎಂಬುದು ಪೊಲೀಸರ ತನಿಖೆಯ ನಂತರವಷ್ಟೇ ಸ್ಪಷ್ಟವಾಗಲಿದೆ. ಪ್ರಸ್ತುತ ಉತ್ತರ ಜಿಲ್ಲಾ ಪೊಲೀಸರು ಈ ಸಂಪೂರ್ಣ ಪ್ರಕರಣದ ತನಿಖೆಯಲ್ಲಿ ತೊಡಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com