ಎನ್‌ಎಸ್‌ಯುಐ ಉಸ್ತುವಾರಿಯಾಗಿ ಕನ್ಹಯ್ಯಾ ಕುಮಾರ್ ನೇಮಕಗೊಳಿಸಿದ ಕಾಂಗ್ರೆಸ್

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯುಐ) ಉಸ್ತುವಾರಿಯಾಗಿ ಕನ್ಹಯ್ಯಾ ಕುಮಾರ್ ಅವರನ್ನು ಕಾಂಗ್ರೆಸ್ ಗುರುವಾರ ನೇಮಕ ಮಾಡಿದೆ. 
ಕನ್ಹಯ್ಯಾ ಕುಮಾರ್
ಕನ್ಹಯ್ಯಾ ಕುಮಾರ್

ನವದೆಹಲಿ: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯುಐ) ಉಸ್ತುವಾರಿಯಾಗಿ ಕನ್ಹಯ್ಯಾ ಕುಮಾರ್ ಅವರನ್ನು ಕಾಂಗ್ರೆಸ್ ಗುರುವಾರ ನೇಮಕ ಮಾಡಿದೆ. 

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡಲೇ ಜಾರಿಗೆ ಬರುವಂತೆ ಕನ್ಹಯ್ಯಾ ಕುಮಾರ್ ಅವರನ್ನು ಎನ್ ಎಸ್ ಯುಐ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆಯಲ್ಲಿ  ತಿಳಿಸಿದ್ದಾರೆ.

ಕನ್ಹಯ್ಯಾ ಕುಮಾರ್ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ,  ಅಖಿಲ ಭಾರತ ವಿದ್ಯಾರ್ಥಿ ಫೆಡರೇಶನ್ ನಾಯಕರಾಗಿ ಹಾಗೂ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 2021ರ ಸೆಪ್ಟೆಂಬರ್ ರಂದು ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com