ಎನ್‌ಸಿಪಿ ಬಂಡಾಯದ ನಡುವೆಯೇ ಶರದ್ ಪವಾರ್ ಭೇಟಿ ಮಾಡಿದ ರಾಹುಲ್ ಗಾಂಧಿ

ಎನ್ ಸಿಪಿಯಲ್ಲಿನ ಬಂಡಾಯದ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಹಿರಿಯ ನಾಯಕನಿಗೆ ಬೆಂಬಲ ಸೂಚಿಸಿದ್ದಾರೆ.
ಶರದ್ ಪವಾರ್ ಭೇಟಿ ಮಾಡಿದ ರಾಹುಲ್ ಗಾಂಧಿ
ಶರದ್ ಪವಾರ್ ಭೇಟಿ ಮಾಡಿದ ರಾಹುಲ್ ಗಾಂಧಿ
Updated on

ನವದೆಹಲಿ: ಎನ್ ಸಿಪಿಯಲ್ಲಿನ ಬಂಡಾಯದ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಹಿರಿಯ ನಾಯಕನಿಗೆ ಬೆಂಬಲ ಸೂಚಿಸಿದ್ದಾರೆ.

ಶರದ್ ಪವಾರ್ ಅವರು ಕರೆದಿದ್ದ ಕಾರ್ಯಕಾರಿ ಸಮಿತಿ ಸಭೆಯ ನಂತರ ಜನಪಥ್ 6ರಲ್ಲಿರುವ ಅವರ ನಿವಾಸಕ್ಕೆ ತೆರಳಿದ ರಾಹುಲ್ ಗಾಂಧಿ ಅವರು, ಸಂಕಷ್ಟದ ಸಮಯದಲ್ಲಿ ನಾವು ನಿಮ್ಮ ಜೊತೆಗಿದ್ದೇವೆ ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಾರ್ಯಕಾರಿ ಸಮಿತಿ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶರದ್ ಪವಾರ್ ಅವರು, ತಾವೇ ಎನ್‌ಸಿಪಿ ಅಧ್ಯಕ್ಷರು ಎಂದು ಪ್ರತಿಪಾದಿಸಿದರು.

ನಾನು ಎನ್‌ಸಿಪಿ ಅಧ್ಯಕ್ಷ, ಯಾರಾದರೂ ತಾವು ಎನ್ ಸಿಪಿ ಅಧ್ಯಕ್ಷರು ಎಂದು ಹೇಳಿದರೆ ಅದು ಸಂಪೂರ್ಣ ಸುಳ್ಳು. ಅದರಲ್ಲಿ ಯಾವುದೇ ಸತ್ಯವಿಲ್ಲ. ಯಾರಾದರೂ(ಅಜಿತ್ ಪವಾರ್) ಏನಾದರೂ ಹೇಳಿದರೆ ಅದಕ್ಕೆ ಯಾವುದೇ ಪ್ರಾಮುಖ್ಯತೆ ನೀಡಬೇಡಿ ಎಂದು ಪವಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com