ಕರೌಲಿ ಅತ್ಯಾಚಾರ ಪ್ರಕರಣ: ಅನಾಗರಿಕ ಕೃತ್ಯ, ದಲಿತ ಬಾಲಕಿಯ ಗ್ಯಾಂಗ್ ರೇಪ್; ಕೊಲೆ ಮಾಡಿ ಆ್ಯಸಿಡ್ ಸುರಿದ ದುರುಳರು!

ಕರೌಲಿಯಲ್ಲಿ ದಲಿತ ಬಾಲಕಿಯೊಬ್ಬಳನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ನೀಚ ಕೆಲಸ ಕೇಳಿದರೆ ಎಂತಹವರ ಹೃದಯವೂ ನಡುಗುತ್ತದೆ. 
ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ
Updated on

ಕರೌಲಿ(ರಾಜಸ್ಥಾನ): ಕರೌಲಿಯಲ್ಲಿ ದಲಿತ ಬಾಲಕಿಯೊಬ್ಬಳನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ನೀಚ ಕೆಲಸ ಕೇಳಿದರೆ ಎಂತಹವರ ಹೃದಯವೂ ನಡುಗುತ್ತದೆ. 

ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬಳಿಕ ಆಕೆಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ನಂತರ ಆರೋಪಿಗಳು ದಲಿತ ಹುಡುಗಿಯ ಗುರುತು ಮರೆಮಾಚಲು ಆಕೆಯ ಮುಖವನ್ನು ಆಸಿಡ್‌ನಿಂದ ಸುಟ್ಟಿದ್ದಾರೆ. ಇದಾದ ಬಳಿಕ ಬಾಲಕಿಯನ್ನು ಬಾವಿಗೆ ಎಸೆದಿದ್ದಾರೆ. ಈ ಹೃದಯ ವಿದ್ರಾವಕ ಘಟನೆ ಇಡೀ ಪ್ರದೇಶದಲ್ಲಿ ತಲ್ಲಣ ಮೂಡಿಸಿದೆ.

ನಡೌಟಿ ಉಪವಿಭಾಗದ ತೋಡಭೀಮ್‌ನ ಮೋಹನಪುರದಲ್ಲಿ ಈ ಘಟನೆ ನಡೆದಿದೆ. ಗುರುವಾರ ಇಲ್ಲಿನ ಬಾವಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಮೃತದೇಹದ ಗುರುತು ಮರೆಮಾಚಲು ಆ್ಯಸಿಡ್ ಹಾಕಿ ಸುಟ್ಟು ಹಾಕಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ವರದಿಯಾದ ತಕ್ಷಣ ಆ ಭಾಗದ ಜನರಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಗ್ರಾಮಸ್ಥರು ಪ್ರತಿಭಟನೆ ಆರಂಭಿಸಿದರು. ಮತ್ತೊಂದೆಡೆ, ಸಂಸದ ಕಿರೋಡಿ ಲಾಲ್ ಮೀನಾ ಗ್ರಾಮಸ್ಥರು ಮತ್ತು ಬಿಜೆಪಿ ಕಾರ್ಯಕರ್ತರೊಂದಿಗೆ ಹಿಂಡೌನ್ ನಗರದ ಸರ್ಕಾರಿ ಆಸ್ಪತ್ರೆಗೆ ತಲುಪಿದರು. ಅಲ್ಲಿ ತೀವ್ರ ಪ್ರತಿಭಟನೆ ನಡೆಸಿದರು. ಸಂತ್ರಸ್ತೆಗೆ ನ್ಯಾಯ ಕೊಡಿಸುವಂತೆ ಸಂಸದರು ಅಲ್ಲಿಯೇ ಧರಣಿ ಕುಳಿತರು.

ಈ ಘಟನೆ ಬಗ್ಗೆ ಸಂಸದ ಕಿರೋಡಿ ಲಾಲ್ ಮೀನಾ ಪೊಲೀಸ್ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ ಪೊಲೀಸರ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ದಲಿತ ಬಾಲಕಿಯ ಭೀಕರ ಹತ್ಯೆಯ ನಂತರವೂ ಪೊಲೀಸರು ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದರು. ಪೊಲೀಸರು ಸ್ಥಳಕ್ಕಾಗಮಿಸಿದ ಎಫ್‌ಎಸ್‌ಎಲ್‌ ತಂಡವನ್ನು ಕರೆಯದೆ ಶವವನ್ನು ಹೊರತೆಗೆದು ಉಪ ಆರೋಗ್ಯ ಕೇಂದ್ರಕ್ಕೆ ಕಳುಹಿಸಿದ್ದಾರೆ. ಈ ವೇಳೆ ಧರಣಿ ಆರಂಭಿಸಿದ ಸಂಸದರು, ಬಾಲಕಿಯ ಹೇಯ ಹತ್ಯೆ ಆರೋಪಿಗಳನ್ನು ಬಂಧಿಸದಂತೆ ಎಚ್ಚರಿಕೆ ನೀಡಿದರು. ಅಲ್ಲಿಯವರೆಗೂ ಪ್ರತಿಭಟನೆ ಮುಂದುವರಿಯಲಿದೆ. ಸಂತ್ರಸ್ತ ಕುಟುಂಬಕ್ಕೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಬೇಕು ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಘಟನೆಯ ನಂತರ ನಡೌಟಿ ಪೊಲೀಸ್ ಠಾಣೆ ಪ್ರಭಾರಿ ಬಾಬುಲಾಲ್ ಅವರು ಈ ದಲಿತ ಬಾಲಕಿ ತೊಡಭೀಮ್ ಪ್ರದೇಶದ ಮೋಹನಪುರ ನಿವಾಸಿ ಎಂದು ಹೇಳಿದ್ದಾರೆ. ಬುಧವಾರ ಆಕೆ ನಾಪತ್ತೆಯಾಗಿದ್ದಳು. ಗುರುವಾರ ಅವರ ಶವವನ್ನು ಬಾವಿಯಿಂದ ಹೊರತೆಗೆಯಲಾಯಿತು. ಈ ವೇಳೆ ಬಾಲಕಿಯನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com