ಕರೌಲಿ: ಪ್ರೇಮ ಪ್ರಕರಣದಲ್ಲಿ ದಲಿತ ಬಾಲಕಿ ಹತ್ಯೆ, ಪ್ರಮುಖ ಆರೋಪಿ ಬಂಧನ

ಕರೌಲಿಯ ಹಿಂದೌನ್‌ನಲ್ಲಿ ದಲಿತ ಬಾಲಕಿಯ ಹತ್ಯೆಗೈದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಕರೌಲಿ ಪೊಲೀಸರು ಈ ವಿಚಾರದಲ್ಲಿ ಮಹತ್ವದ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. 
ಮೃತ ಬಾಲಕಿ
ಮೃತ ಬಾಲಕಿ
Updated on

ಕರೌಲಿ: ಕರೌಲಿಯ ಹಿಂದೌನ್‌ನಲ್ಲಿ ದಲಿತ ಬಾಲಕಿಯ ಹತ್ಯೆಗೈದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಕರೌಲಿ ಪೊಲೀಸರು ಈ ವಿಚಾರದಲ್ಲಿ ಮಹತ್ವದ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. 

ಪೊಲೀಸರ ಪ್ರಕಾರ, ಇದು ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದೆ. ಇದರೊಂದಿಗೆ ಈ ವಿಷಯ ರಾಜಕೀಯವಾಗಿಯೂ ಬಿಸಿ ಏರಿದೆ. ಒಂದೆಡೆ ವಿರೋಧ ಪಕ್ಷಗಳು ರಾಜ್ಯ ಸರ್ಕಾರಕ್ಕೆ ಮುತ್ತಿಗೆ ಹಾಕುತ್ತಿದ್ದರೆ, ಇನ್ನೊಂದೆಡೆ ಸಂಸದ ಡಾ.ಕಿರೋರಿ ಲಾಲ್ ಮೀನಾ ಸೇರಿದಂತೆ ಹಲವು ಮುಖಂಡರು ಈ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ನ್ಯಾಯ ದೊರಕಿಸಿಕೊಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊಲೆ ಆರೋಪದ ಮೇಲೆ 20 ವರ್ಷದ ಯುವಕ ಗೋಳು ಮೀನಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಕರೌಲಿ ಪೊಲೀಸ್ ವರಿಷ್ಠಾಧಿಕಾರಿ ಮಮತಾ ಗುಪ್ತಾ ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಇದು ಪ್ರೇಮ ಪ್ರಕರಣವಾಗಿದ್ದು ಆರೋಪಿ ಮತ್ತು ಸಂತ್ರಸ್ತೆ ಪರಸ್ಪರ ಸಂಬಂಧ ಹೊಂದಿದ್ದರು. ಹುಡುಗಿಗೆ ಇಷ್ಟವಾಗದಿದ್ದರೂ ಹುಡುಗಿಯ ಮನೆಯವರು ಅವಳ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ನಡುವೆ ಆರೋಪಿ ಗೋಳು ಮೀನಾ ಹಾಗೂ ಬಾಲಕಿಯ ನಡುವೆ ಜಗಳ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಬಾಲಕಿಯನ್ನು ಆಕೆಯ ತಂದೆಯ ಮತ್ತೊಂದು ಮನೆಗೆ ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿದ್ದಾರೆ. ಇದಾದ ಬಳಿಕ ಆರೋಪಿ ಬಾಲಕಿಯ ಶವವನ್ನು ಬಾವಿಗೆ ಎಸೆದಿದ್ದಾನೆ. ಆದರೆ, ಇದುವರೆಗೂ ಕೊಲೆಗೆ ಬಳಸಿದ್ದ ಆಯುಧವನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗಿಲ್ಲ. ಆರೋಪಿಯನ್ನು ಜೈಪುರದಲ್ಲಿ ಬಂಧಿಸಲಾಗಿದೆ. ಆರೋಪಿಗಳು ಮತ್ತು ಮೃತರು ಅದೇ ಗ್ರಾಮದ ಮೋಹನಪುರ ನಿವಾಸಿಗಳು.

ಬಾಲಕಿಯ ಮರಣೋತ್ತರ ಪರೀಕ್ಷೆಯನ್ನು ಎರಡು ಬಾರಿ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಬಾಲಕಿಯ ಮೇಲಿನ ಅತ್ಯಾಚಾರದ ಪ್ರಶ್ನೆಗೆ, ಎಫ್‌ಎಸ್‌ಎಲ್ ವರದಿ ಬರುವವರೆಗೆ ಅತ್ಯಾಚಾರ ನಡೆದಿರುವುದನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಈ ವೇಳೆ ಪೊಲೀಸ್ ವರಿಷ್ಠಾಧಿಕಾರಿ ಮಮತಾ ಗುಪ್ತಾ ಅವರು, ಯಾವುದೇ ಪೊಲೀಸರು ಕರ್ತವ್ಯಲೋಪ ಎಸಗಿದ್ದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ. ಇದರೊಂದಿಗೆ ಆರೋಪಿಗಳಿಗೆ ಸಹಕರಿಸಿದವರ ಹೆಸರು ಬಹಿರಂಗ ಪಡಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನೊಂದೆಡೆ 19ರ ಹರೆಯದ ಯುವತಿಯ ಸಾವಿನ ಪ್ರಕರಣ ಹಿಂಸಾಚಾರದಲ್ಲಿ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಮತ್ತು ಬಿಎಸ್‌ಪಿ ನಾಯಕರು ಈ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ನಿರಂತರವಾಗಿ ದಾಳಿ ಮಾಡುತ್ತಿದ್ದಾರೆ. ಇನ್ನು ಬಾಲಕಿಯ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕು ಹಾಗೂ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಡಾ.ಕಿರೋರಿ ಲಾಲ್ ಮೀನಾ ಆಗ್ರಹಿಸಿದ್ದಾರೆ.

ಆರೋಪಿಗಳು ಬಾಲಕಿಯನ್ನು ಆಕೆಯ ಮನೆಯಿಂದ ಅಪಹರಿಸಿ, ಬಳಿಕ ಆಕೆಗೆ ಗುಂಡಿಕ್ಕಿ ಕೊಂದು ಆಕೆಯ ಗುರುತು ಮರೆಮಾಚುವ ಉದ್ದೇಶದಿಂದ ಬಾಲಕಿಯ ಮೈಮೇಲೆ ಆಸಿಡ್ ಸುರಿದು ಬಾವಿಗೆ ಎಸೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com