ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ: ಕೇಂದ್ರದ ನಿಲುವನ್ನು ಕಾಂಗ್ರೆಸ್ ಬೆಂಬಲಿಸಲ್ಲ!

ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಕೇಂದ್ರದ ಸುಗ್ರೀವಾಜ್ಞೆಯನ್ನು ಬೆಂಬಲಿಸುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಕೆಸಿ ವೇಣುಗೋಪಾಲ್
ಕೆಸಿ ವೇಣುಗೋಪಾಲ್
Updated on

ನವದೆಹಲಿ: ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಕೇಂದ್ರದ ಸುಗ್ರೀವಾಜ್ಞೆಯನ್ನು ಬೆಂಬಲಿಸುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ದೇಶದಲ್ಲಿ 'ಫೆಡರಲಿಸಂ ಅನ್ನು ನಾಶಪಡಿಸುವ' ಕೇಂದ್ರ ಸರ್ಕಾರದ ಯಾವುದೇ ಪ್ರಯತ್ನವನ್ನು ನಾವು ವಿರೋಧಿಸುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದರು.

ರಾಜ್ಯಪಾಲರ ಮೂಲಕ ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಮಧ್ಯಪ್ರವೇಶಿಸುವ ಕೇಂದ್ರದ ಯಾವುದೇ ಕ್ರಮವನ್ನು ವಿರೋಧಿಸುವುದು ನಮ್ಮ ಪಕ್ಷದ ಸ್ಪಷ್ಟ ನಿಲುವಾಗಿದೆ. ದೆಹಲಿ ಸುಗ್ರೀವಾಜ್ಞೆ ಮಸೂದೆ ಸಂಸತ್ತಿನಲ್ಲಿ ಬಂದಾಗ ಅದನ್ನು ವಿರೋಧಿಸುತ್ತೇವೆ ಎಂದರು.

'ಫೆಡರಲಿಸಂ ಅಂತ್ಯಗೊಳಿಸುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ನಾವು ನಿರಂತರವಾಗಿ ವಿರೋಧಿಸುತ್ತಿದ್ದೇವೆ. ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳನ್ನು ರಾಜ್ಯಪಾಲರ ಮೂಲಕ ನಡೆಸುವ ಕೇಂದ್ರ ಸರ್ಕಾರದ ಧೋರಣೆಯನ್ನು ನಿರಂತರವಾಗಿ ವಿರೋಧಿಸುತ್ತಲೇ ಬಂದಿದ್ದೇವೆ. ನಮ್ಮ ನಿಲುವು ಸ್ಪಷ್ಟವಾಗಿದೆ, ನಾವು ದೆಹಲಿ ಸುಗ್ರೀವಾಜ್ಞೆಯನ್ನು ಬೆಂಬಲಿಸುವುದಿಲ್ಲ ಎಂದು ಕೆಸಿ ವೇಣುಗೋಪಾಲ್ ಹೇಳಿದರು.

ಇದರೊಂದಿಗೆ ಸೋಮವಾರದಿಂದ ಬೆಂಗಳೂರಿನಲ್ಲಿ ಆರಂಭವಾಗಲಿರುವ ಪ್ರತಿಪಕ್ಷಗಳ ಎರಡನೇ ಸಭೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಭಾಗವಹಿಸಲು ಹಾದಿ ಸುಗಮವಾಗಿದೆ.

ದೆಹಲಿ ಸುಗ್ರೀವಾಜ್ಞೆ ಕುರಿತು ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ನಂತರವೇ ವಿರೋಧ ಪಕ್ಷಗಳ ಮುಂದಿನ ಸಭೆಗೆ ಹಾಜರಾಗುವ ಬಗ್ಗೆ ನಿರ್ಧರಿಸುತ್ತದೆ ಎಂದು ಎಎಪಿ ಹೇಳಿತ್ತು.

ಏತನ್ಮಧ್ಯೆ, ಎಎಪಿ ನಾಯಕ ರಾಘವ್ ಚಡ್ಡಾ ಅವರು ಸುಗ್ರೀವಾಜ್ಞೆಗೆ ಕಾಂಗ್ರೆಸ್‌ನ "ವರ್ಣೀಯ ವಿರೋಧ" ವನ್ನು ಸ್ವಾಗತಿಸಿದ್ದು ಇದು "ಸಕಾರಾತ್ಮಕ ಬೆಳವಣಿಗೆ" ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com