ಭೋಪಾಲ್- ದೆಹಲಿ ವಂದೇ ಭಾರತ್ ರೈಲಿನ ಬ್ಯಾಟರಿ ಬಾಕ್ಸ್‌ನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಿಂದ ನವದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಒಂದು ಬೋಗಿಯ ಬ್ಯಾಟರಿ ಬಾಕ್ಸ್‌ನಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಕಿ ಕಾಣಿಸಿಕೊಂಡ ವಂದೇ ಭಾರತ್ ರೈಲು
ಬೆಂಕಿ ಕಾಣಿಸಿಕೊಂಡ ವಂದೇ ಭಾರತ್ ರೈಲು

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಿಂದ ನವದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಒಂದು ಬೋಗಿಯ ಬ್ಯಾಟರಿ ಬಾಕ್ಸ್‌ನಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವಘಡ ಸಂಭವಿಸಿದಾಗ ಕೋಚ್‌ನಲ್ಲಿದ್ದ 20-22 ಪ್ರಯಾಣಿಕರನ್ನು ತಕ್ಷಣವೇ ಬೇರೆ ಕೋಚ್ ಗಳಿಗೆ ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಬೆಳಿಗ್ಗೆ 6.45 ರ ಸುಮಾರಿನಲ್ಲಿ ಈ ಘಟನೆ ಸಂಭವಿಸಿದೆ. ರಾಣಿ ಕಮಲಾಪತಿ-ಹಜರತ್ ನಿಜಾಮುದ್ದೀನ್ ವಂದೇ ಭಾರತ್ ರೈಲಿನ ಸಿ-12 ಕೋಚ್‌ನ ಬ್ಯಾಟರಿ ಬಾಕ್ಸ್‌ನಲ್ಲಿ ಬೆಂಕಿಯನ್ನು ಕೆಲ ರೈಲು ಸಿಬ್ಬಂದಿ ಗಮನಿಸಿದ ನಂತರ ತಕ್ಷಣವೇ ವಿದಿಶಾ ಜಿಲ್ಲೆಯ ಕುರ್ವೈ ಮತ್ತು ಕೈಥೋರಾ ನಿಲ್ದಾಣಗಳ ನಡುವೆ ನಿಲ್ಲಿಸಲಾಯಿತು ಎಂದು ಹೇಳಿದರು.

ತಕ್ಷಣವೇ ಬೆಂಕಿಯನ್ನು ಹತೋಟಿಗೆ ತರಲಾಯಿತು. ರೈಲ್ವೆ ಸಿಬ್ಬಂದಿ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com