ಕಾಶ್ಮೀರ: ಪೂಂಚ್‌ನಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ!

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. 
ಭಾರತೀಯ ಸೇನೆ
ಭಾರತೀಯ ಸೇನೆ
Updated on

ಪೂಂಚ್(ಜಮ್ಮು): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. 

ಓರ್ವ ಭಯೋತ್ಪಾದಕನ ದೇಹವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದ್ದು, ಇನ್ನೊಬ್ಬ ಭಯೋತ್ಪಾದಕ ಗುಂಡು ಹಾರಿಸಿದ ನಂತರ ಪೂಂಚ್ ನದಿಗೆ ಬಿದ್ದಿದ್ದಾನೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ.

ಜುಲೈ 16-17 ರ ಮಧ್ಯರಾತ್ರಿ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ಅಧಿಕಾರಿ ತಿಳಿಸಿದ್ದಾರೆ. ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಪೂಂಚ್ ನದಿಯ ಬಳಿ ಎಲ್ಒಸಿ ದಾಟಿ ಭಾರತದ ಕಡೆಗೆ ಅನುಮಾನಾಸ್ಪದ ಚಲನವಲನಗಳನ್ನು ಗಸ್ತು ಪಡೆಗಳು ಗಮನಿಸಿದ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com