ತಮ್ಮ ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷಗಳು ದೇಶದ ಹೆಸರನ್ನು ಬಳಸಿಕೊಳ್ಳುತ್ತಿವೆ: ಚುನಾವಣಾ ಆಯೋಗಕ್ಕೆ ಬಿಜೆಪಿ ನಾಯಕ ದೂರು

ಭಾರತೀಯ ಜನತಾ ಪಕ್ಷದ ನಾಯಕ ಅಶುತೋಷ್ ದುಬೆ ಮಂಗಳವಾರ ಭಾರತದ ಚುನಾವಣಾ ಆಯೋಗಕ್ಕೆ ಪತ್ರ ಬರೆದು ವಿರೋಧ ಪಕ್ಷಗಳ ಮೈತ್ರಿಗೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (ಇಂಡಿಯಾ) ಎಂದು ಹೆಸರಿಟ್ಟಿರುವುದರ ವಿರುದ್ಧ ಚುನಾವಣಾ ಆಯೋಗ ಮೊರೆ ಹೋಗಿದ್ದಾರೆ.
ವಿರೋಧ ಪಕ್ಷಗಳ ನಾಯಕರ ಸಭೆ
ವಿರೋಧ ಪಕ್ಷಗಳ ನಾಯಕರ ಸಭೆ

ನವದೆಹಲಿ: ಭಾರತೀಯ ಜನತಾ ಪಕ್ಷದ ನಾಯಕ ಅಶುತೋಷ್ ದುಬೆ ಮಂಗಳವಾರ ಭಾರತದ ಚುನಾವಣಾ ಆಯೋಗಕ್ಕೆ ಪತ್ರ ಬರೆದು ವಿರೋಧ ಪಕ್ಷಗಳ ಮೈತ್ರಿಗೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (ಇಂಡಿಯಾ) ಎಂದು ಹೆಸರಿಟ್ಟಿರುವುದರ ವಿರುದ್ಧ ಚುನಾವಣಾ ಆಯೋಗ ಮೊರೆ ಹೋಗಿದ್ದಾರೆ.

ವಿರೋಧ ಪಕ್ಷಗಳು ರಾಷ್ಟ್ರದ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿರುವಂತೆ ಕಾಣುತ್ತಿದೆ, ಭಾರತದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ, 26 ವಿರೋಧ ಪಕ್ಷಗಳು ತಮ್ಮ ಒಕ್ಕೂಟವನ್ನು ಘೋಷಿಸಿ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್ ಇನ್‌ಕ್ಲೂಸಿವ್ ಅಲೈಯನ್ಸ್ (INDIA) ಎಂದು ಕರೆದಿವೆ. 2024 ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎಯನ್ನು ಒಗ್ಗಟ್ಟಿನಿಂದ ಎದುರಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಹೋರಾಟ ಇಂಡಿಯಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನಡುವೆ ಎಂದಿದ್ದರು.

ವಿರೋಧ ಪಕ್ಷಗಳ ಹೆಸರಿನ ನಿರ್ಧಾರ ಸ್ವಂತಿಕೆಯ ಕೊರತೆಯನ್ನು ತೋರಿಸಿರುವುದು ಮಾತ್ರವಲ್ಲದೆ ನಮ್ಮ ರಾಷ್ಟ್ರದ ಹೆಸರನ್ನು ಅಧಿಕಾರ ಪಡೆಯಲು ಕೇವಲ ಸಾಧನವಾಗಿ ಬಳಸುತ್ತಿರುವಂತೆ ತೋರುತ್ತಿದೆ ಎಂದು ಬಿಜೆಪಿ ಮಹಾರಾಷ್ಟ್ರದ ಸಾಮಾಜಿಕ ಮಾಧ್ಯಮ-ಕಾನೂನು ಮತ್ತು ಸಲಹಾ ವಿಭಾಗದ ಮುಖ್ಯಸ್ಥ ದುಬೆ ಹೇಳಿದ್ದಾರೆ.

ಚುನಾವಣಾ ಆಯೋಗಕ್ಕೆ ಅವರು ಬರೆದ ಪತ್ರದಲ್ಲಿ, ಇತ್ತೀಚೆಗೆ ಯುನೈಟೆಡ್ ಪ್ರೋಗ್ರೆಸಿವ್ ಅಲೈಯನ್ಸ್ (ಯುಪಿಎ)ನ್ನು ಭಾರತೀಯ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಅಂತರ್ಗತ ಒಕ್ಕೂಟ (ಇಂಡಿಯಾ) ಎಂದು ಮರುನಾಮಕರಣ ಮಾಡಲಾಗುತ್ತಿದೆ. ಈ ಕ್ರಮವು ವಿರೋಧ ಪಕ್ಷಗಳ ರಾಜಕೀಯ ಆಕಾಂಕ್ಷೆಗಳಿಗಾಗಿ ನಮ್ಮ ರಾಷ್ಟ್ರದ ಹೆಸರನ್ನು ಬಳಸಿಕೊಳ್ಳುವ ದುರುದ್ದೇಶಪೂರ್ವಕವಾಗಿ ಬಳಸಿಕೊಳ್ಳುವ ಪ್ರಯತ್ನವೆಂದು ಪರಿಗಣಿಸಲಾಗಿದೆ, ಇದು ದೇಶ ಮತ್ತು ಅದರ ನಾಗರಿಕರಿಗೆ ಅಗೌರವ ಎಂದು ನಾನು ನಂಬುತ್ತೇನೆ ಎಂದಿದ್ದಾರೆ. 

ರಾಜಕೀಯ ಪಕ್ಷಗಳು ತಮ್ಮ ಹೆಸರನ್ನು ಆಯ್ಕೆ ಮಾಡುವ ಮತ್ತು ಚುನಾವಣಾ ಯಶಸ್ಸಿಗೆ ತಮ್ಮ ಕಾರ್ಯತಂತ್ರಗಳನ್ನು ಅಭಿವೃದ್ಧಿಪಡಿಸುವ ಹಕ್ಕನ್ನು ಹೊಂದಿವೆ. ನಮ್ಮ ರಾಷ್ಟ್ರದ ಘನತೆ ಮತ್ತು ಸಮಗ್ರತೆಗೆ ಧಕ್ಕೆಯಾಗದಂತೆ ರಾಜಕೀಯ ಪಕ್ಷಗಳು ನಿರ್ಧಾರ ತೆಗೆದುಕೊಳ್ಳಬೇಕು. ತಮ್ಮ ರಾಜಕೀಯ ಕಾರ್ಯಸೂಚಿಯನ್ನು ನಮ್ಮ ಹೆಸರಿನೊಂದಿಗೆ ನೇರವಾಗಿ ಸಂಯೋಜಿಸುವ ಮೂಲಕ. ದೇಶ, ಭಾರತೀಯ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಅಂತರ್ಗತ ಒಕ್ಕೂಟ (ಇಂಡಿಯಾ) ಸ್ವಂತಿಕೆಯ ಕೊರತೆಯನ್ನು ತೋರಿಸಿದೆ ಮಾತ್ರವಲ್ಲದೆ ನಮ್ಮ ರಾಷ್ಟ್ರದ ಹೆಸರನ್ನು ಅಧಿಕಾರವನ್ನು ಪಡೆಯಲು ಕೇವಲ ಸಾಧನವಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಭವಿಷ್ಯದಲ್ಲಿ ಪಕ್ಷ ಗೆದ್ದರೆ ಜನರು 'ಭಾರತ ಗೆದ್ದಿದೆ' ಎಂದು ಹೇಳುತ್ತಾರೆ, ಆದರೆ ಪಕ್ಷ ಸೋತರೆ ಜನರು 'ಭಾರತ ಸೋತಿದೆ' ಎಂದು ಹೇಳುತ್ತಾರೆ ಎಂದು ಪತ್ರದಲ್ಲಿ ಬಿಜೆಪಿ ನಾಯಕ ಪ್ರತಿಪಾದಿಸಿದ್ದಾರೆ. ಇದು ರಾಷ್ಟ್ರೀಯ ಅವಮಾನದ ಭಾವನೆಯನ್ನು ಉತ್ತೇಜಿಸುತ್ತದೆ ಎಂದಿದ್ದಾರೆ.

ಚುನಾವಣೆಯ ಫಲಿತಾಂಶಗಳು ಇಡೀ ರಾಷ್ಟ್ರದ ಗೆಲುವು ಅಥವಾ ನಷ್ಟಕ್ಕೆ ಸಮನಾಗಿರುತ್ತದೆ ಎಂದು ಇದು ಸೂಚಿಸುತ್ತದೆ, ವೈವಿಧ್ಯಮಯ ದೃಷ್ಟಿಕೋನಗಳು, ಆಕಾಂಕ್ಷೆಗಳು ಮತ್ತು ವೈಯಕ್ತಿಕ ನಾಗರಿಕರ ಪ್ರಜಾಪ್ರಭುತ್ವ ಹಕ್ಕುಗಳನ್ನು ಕಡೆಗಣಿಸುತ್ತದೆ. ನಮ್ಮ ಪ್ರಜಾಪ್ರಭುತ್ವದ ಬಹುತ್ವದ ಸ್ವರೂಪವನ್ನು ಹಾಳುಮಾಡುತ್ತದೆ. ರಾಜಕೀಯ ಲಾಭಕ್ಕಾಗಿ ಸಾರ್ವಜನಿಕರ ಭಾವನೆಯನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಭಾರತೀಯ ಚುನಾವಣಾ ಆಯೋಗವು ಈ ವಿಷಯವನ್ನು ಕೂಲಂಕಷವಾಗಿ ತನಿಖೆ ಮಾಡಲು ಮತ್ತು ರಾಜಕೀಯ ಪಕ್ಷಗಳು ತಮ್ಮ ಹೆಸರನ್ನು ಆಯ್ಕೆಮಾಡುವಾಗ ಮತ್ತು ಘೋಷಣೆಗಳನ್ನು ರೂಪಿಸುವಾಗ ನೈತಿಕ ಮಾನದಂಡಗಳಿಗೆ ಬದ್ಧವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನಮ್ಮ ರಾಷ್ಟ್ರದ ಹೆಸರಿನ ಪಾವಿತ್ರ್ಯತೆಯನ್ನು ಎತ್ತಿಹಿಡಿಯುವುದು ಅತ್ಯಗತ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com