ಎದೆ ನೋವಿನಿಂದ ಆರ್ ಜೆಡಿಯ ತೇಜ್ ಪ್ರತಾಪ್ ಆಸ್ಪತ್ರೆಗೆ ದಾಖಲು

ಬಿಹಾರ ಸಚಿವ ಹಾಗೂ ರಾಷ್ಟ್ರೀಯ ಜನತಾದಳ ನಾಯಕ ತೇಜ್ ಪ್ರತಾಪ್ ಯಾದವ್ ಗೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. 
ಆರ್ ಜೆಡಿಯ ತೇಜ್ ಪ್ರತಾಪ್
ಆರ್ ಜೆಡಿಯ ತೇಜ್ ಪ್ರತಾಪ್
Updated on

ಪಾಟ್ನ: ಬಿಹಾರ ಸಚಿವ ಹಾಗೂ ರಾಷ್ಟ್ರೀಯ ಜನತಾದಳ ನಾಯಕ ತೇಜ್ ಪ್ರತಾಪ್ ಯಾದವ್ ಗೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಮೆಡಿವರ್ಸಲ್ ಆಸ್ಪತ್ರೆಗೆ ತೇಜ್ ಪ್ರತಾಪ್ ಯಾದವ್ ಅವರನ್ನು ದಾಖಲಿಸಲಾಗಿದೆ. 2022 ರ ಆಗಸ್ಟ್ 16 ರಂದು ತೇಜ್ ಪ್ರತಾಪ್ ಯಾದವ್ ಹಾಗೂ ಆತನ ಸಹೋದರ ಸಿಎಂ ತೇಜಸ್ವಿ ಯಾದವ್ ಬಿಹಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. 

ಬಿಹಾರದ ಸರ್ಕಾರದಲ್ಲಿ ತೇಜ್ ಪ್ರತಾಪ್ ಯಾದವ್, ಪರಿಸರ ಹಾಗೂ ಅರಣ್ಯ, ಹವಾಮಾನ ಬದಲಾವಣೆಯ ಸಚಿವರಾಗಿದ್ದು, ಸೈಕಲ್ ನಲ್ಲಿ ಸಂಚರಿಸುವ ಮೂಲಕ ಪರಿಸರ ಸಂರಕ್ಷಣೆಯ ವಿಷಯದಲ್ಲಿ ಬದ್ಧತೆ ತೋರಿ ಸುದ್ದಿಯಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com