ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ತಡೆ ಗುರುವಾರದವರೆಗೂ ವಿಸ್ತರಣೆ

ಜ್ಞಾನವಾಪಿ ಮಸೀದಿಯ ಸಮೀಕ್ಷೆಗೆ ನೀಡಲಾಗಿದ್ದ ತಡೆಯನ್ನು ಅಲಹಾಬಾದ್ ಹೈಕೋರ್ಟ್ ಗುರುವಾರದ ವರೆಗೂ ವಿಸ್ತರಿಸಿದೆ. 
ಜ್ಞಾನವಾಪಿ ಮಸೀದಿ  (ಸಂಗ್ರಹ ಚಿತ್ರ)
ಜ್ಞಾನವಾಪಿ ಮಸೀದಿ (ಸಂಗ್ರಹ ಚಿತ್ರ)
Updated on

ಅಲಹಾಬಾದ್: ಜ್ಞಾನವಾಪಿ ಮಸೀದಿಯ ಸಮೀಕ್ಷೆಗೆ ನೀಡಲಾಗಿದ್ದ ತಡೆಯನ್ನು ಅಲಹಾಬಾದ್ ಹೈಕೋರ್ಟ್ ಗುರುವಾರದ ವರೆಗೂ ವಿಸ್ತರಿಸಿದೆ. 

ಭಾರತೀಯ ಪುರಾತತ್ವ ಇಲಾಖೆಯಿಂದ ಈ ಸಮೀಕ್ಷೆ ನಡೆಯಬೇಕಿತ್ತು. ಸಮೀಕ್ಷೆಯನ್ನು ಪ್ರಶ್ನಿಸಿ ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುತ್ತಿರುವ ಅಂಜುಮನ್ ಇಂತೆಝಮಿಯಾ ಮಸೀದಿಯ ಅರ್ಜಿಯ ವಿಚಾರಣೆಯನ್ನು ಸಿಜೆ ಪ್ರೀತಿಂಕರ್ ದಿವಾಕರ್ ಗುರುವಾರಕ್ಕೆ ಮುಂದೂಡಿದ್ದಾರೆ. 

ಮುಂದಿನ ವಿಚಾರಣೆ ವರೆಗೂ ಎಎಸ್ಐ ಸಮೀಕ್ಷೆಗೆ ನೀಡಲಾಗಿರುವ ತಡೆ ಹಾಗೆಯೇ ಮುಂದುವರೆಯಲಿದೆ ಎಂದು ಕೋರ್ಟ್ ಹೇಳಿದೆ. ಮಧ್ಯಾಹ್ನ 3:30 ಕ್ಕೆ ವಿಚಾರಣೆ ನಡೆಯಲಿದೆ. ವಿಚಾರಣೆ ವೇಳೆ ಎಎಸ್ಐ ಅಧಿಕಾರಿಗಳನ್ನೂ ಕೋರ್ಟ್ ಗೆ ಕರೆಸಲಾಗಿತ್ತು. 

ಜುಲೈ 26 ರ ಸಂಜೆ 5 ಗಂಟೆಯವರೆಗೆ ಜ್ಞಾನವಾಪಿ ಮಸೀದಿ ಸಂಕೀರ್ಣದ ಯಾವುದೇ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ASI) ಸಮೀಕ್ಷೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com