ನಿಮಗೆ ನಮ್ಮ ಬೆಂಬಲವಿದೆ: ರಾಜ್ಯಸಭೆಯಿಂದ ಅಮಾನತುಗೊಂಡಿರುವ ಎಎಪಿಯ ಸಂಜಯ್ ಸಿಂಗ್ಗೆ ಸೋನಿಯಾ ಗಾಂಧಿ
ನವದೆಹಲಿ: 'ಅಶಿಸ್ತಿನ ವರ್ತನೆಗಾಗಿ' ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಂಡಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, 'ನಿಮಗೆ ತಮ್ಮ ಪಕ್ಷದ ಬೆಂಬಲವಿದೆ' ಎಂದು ಬುಧವಾರ ಹೇಳಿದ್ದಾರೆ.
ಸಂಸತ್ತಿಗೆ ಪ್ರವೇಶಿಸುವ ಮೊದಲು ಸೋನಿಯಾ ಗಾಂಧಿ ಅವರು ರಾಜ್ಯಸಭೆಯಿಂದ ಅಮಾನತುಗೊಳಿಸಿರುವುದನ್ನು ಪ್ರತಿಭಟಿಸುತ್ತಿರುವ ಸಂಜಯ್ ಸಿಂಗ್ ಅವರನ್ನು ಸಂಸತ್ತಿನ ಸಂಕೀರ್ಣದಲ್ಲಿ ಭೇಟಿಯಾದರು ಮತ್ತು ಅವರೊಂದಿಗೆ ಸಂಕ್ಷಿಪ್ತ ಮಾತುಕತೆ ನಡೆಸಿದರು.
'ನಿಮಗೆ ನಮ್ಮ ಬೆಂಬಲವಿದೆ' ಎಂದು ಅವರು ಸಂಸತ್ತಿಗೆ ಪ್ರವೇಶಿಸುವ ಮೊದಲು ಅವರಿಗೆ ಹೇಳಿದರು.
ಮಣಿಪುರ ವಿಷಯದ ಕುರಿತು ಪ್ರತಿಭಟನೆ ನಡೆಸುವಾಗ ಸಭಾಪತಿಗಳ ನಿರ್ದೇಶನಗಳನ್ನು ಪದೇ ಪದೆ ಉಲ್ಲಂಘಿಸಿದ್ದಕ್ಕಾಗಿ ಸಂಜಯ್ ಸಿಂಗ್ ಅವರನ್ನು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಸೋಮವಾರ (ಜು.24) ಅಮಾನತುಗೊಳಿಸಲಾಗಿದೆ.
ಸಿಂಗ್ ಸಂಸತ್ತಿನ ಆವರಣದಲ್ಲಿ ತಮ್ಮ ಅಮಾನತು ವಿರುದ್ಧ ಪ್ರತಿಭಟಿಸುತ್ತಿದ್ದಾರೆ ಮತ್ತು ವಿರೋಧ ಪಕ್ಷಗಳ ಒಕ್ಕೂಟವಾದ INDIA ಭಾಗವಾಗಿರುವ ವಿವಿಧ ಪಕ್ಷಗಳ ನಾಯಕರಿಂದ ಬೆಂಬಲವನ್ನು ಪಡೆಯುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ