ಜ್ಞಾನವ್ಯಾಪಿ ಆವರಣದಲ್ಲಿ ಆಗಸ್ಟ್ 3ರವರೆಗೆ ಸರ್ವೆ ಇಲ್ಲ: ಅಲಹಾಬಾದ್ ಹೈಕೋರ್ಟ್

ಜ್ಞಾನವ್ಯಾಪಿ ಆವರಣದಲ್ಲಿ ಆಗಸ್ಟ್ 3ರವರೆಗೆ ವೈಜ್ಞಾನಿಕ ಸರ್ವೆ ನಡೆಸಬಾರದು ಎಂದು ಅಲಹಾಬಾದ್ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಜ್ಞಾನವ್ಯಾಪಿ ಆವರಣ
ಜ್ಞಾನವ್ಯಾಪಿ ಆವರಣ
Updated on

ನವದೆಹಲಿ: ಜ್ಞಾನವ್ಯಾಪಿ ಆವರಣದಲ್ಲಿ ಆಗಸ್ಟ್ 3ರವರೆಗೆ ವೈಜ್ಞಾನಿಕ ಸರ್ವೆ ನಡೆಸಬಾರದು ಎಂದು ಅಲಹಾಬಾದ್ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ವಾರಣಾಸಿಯ ಜ್ಞಾನವಾಪಿ ಮಸೀದಿ ಸ್ಥಳದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಆಗಸ್ಟ್ 3 ರಂದು ತನ್ನ ತೀರ್ಪನ್ನು ಪ್ರಕಟಿಸಲಿದ್ದು, ಅಲ್ಲಿಯವರೆಗೆ ಎಎಸ್‌ಐ ಸಮೀಕ್ಷೆಗೆ ಮಧ್ಯಂತರ ತಡೆ ಜಾರಿಯಲ್ಲಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಸೋಮವಾರ ಸುಪ್ರೀಂ ಕೋರ್ಟ್‌ನಿಂದ ತಾತ್ಕಾಲಿಕವಾಗಿ ತಡೆಹಿಡಿಯಲಾದ ಮಸೀದಿಯ ಸಮೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಿಟಿಂಕರ್ ದಿವಾಕರ್ ಇಂದು ಎರಡೂ ಕಡೆಯ ವಾದಗಳನ್ನು ಆಲಿಸಿದರು. ಸಮೀಕ್ಷೆಗೆ ಸುಪ್ರೀಂ ಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಬುಧವಾರ ಹೈಕೋರ್ಟ್ ಜುಲೈ 27ರವರೆಗೆ ವಿಸ್ತರಿಸಿತ್ತು. ಎಎಸ್‌ಐನ ಹೆಚ್ಚುವರಿ ನಿರ್ದೇಶಕರು ಈ ಹಿಂದೆ ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದು, ಸಮೀಕ್ಷೆಯ ಸಮಯದಲ್ಲಿ ಮಸೀದಿ ರಚನೆಗೆ ಯಾವುದೇ ಹಾನಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯನ್ನು ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧದ ಮನವಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.

ಈ ವಾರದ ಆರಂಭದಲ್ಲಿ, ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂತೇಝಾಮಿಯಾ ಮಸೀದಿಯು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ ಬುಧವಾರ ಸಂಜೆ 5 ಗಂಟೆಯವರೆಗೆ ಎಎಸ್‌ಐ ಸಮೀಕ್ಷೆಯನ್ನು ಸ್ಥಗಿತಗೊಳಿಸಿದ ಒಂದು ದಿನದ ನಂತರ, ಕೆಳ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಮಸೀದಿ ನಿರ್ವಹಣಾ ಸಮಿತಿಗೆ ಸಮಯಾವಕಾಶವನ್ನು ನೀಡಿತ್ತು.

ಪ್ರತಿವಾದಿಯ (ಹಿಂದೂ ಕಡೆಯವರು) ವಕೀಲ ವಿಷ್ಣು ಶಂಕರ್ ಜೈನ್ ಅವರು ರಾಮಮಂದಿರ ಪ್ರಕರಣದಲ್ಲಿ ಎಎಸ್ಐ ಸಮೀಕ್ಷೆಯನ್ನು ನಡೆಸಿದ್ದು, ಅದನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ ಎಂದು ಹೇಳಿದ್ದರು. ಈ ಮಸೀದಿಯು ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿದೆ ಮತ್ತು ಜಿಲ್ಲಾ ನ್ಯಾಯಾಲಯದಲ್ಲಿ ಹಿಂದೂ ದಾವೆದಾರರು ಇದೇ ಸ್ಥಳದಲ್ಲಿ ಹಿಂದೆ ದೇವಾಲಯ ಅಸ್ತಿತ್ವದಲ್ಲಿತ್ತು ಎಂಬುದನ್ನು ನಿರ್ಧರಿಸಲು ಸಮೀಕ್ಷೆ ನಡೆಸಬೇಕು ಎಂದು ಕೋರಿದ್ದರು.

ವಾರಣಾಸಿ ಜಿಲ್ಲಾ ನ್ಯಾಯಾಲಯವು ಶುಕ್ರವಾರ ಎಎಸ್‌ಐಗೆ ಆದೇಶ ನೀಡಿದ್ದು, ಅಗತ್ಯ ಬಿದ್ದರೆ ನೆಲದೊಳಗೆ ಪ್ರವೇಶಿಸುವ ರಾಡಾರ್ ಮತ್ತು ಉತ್ಖನನದಂತಹ ತಂತ್ರಜ್ಞಾನಗಳನ್ನು ಬಳಸಿ ಸಮೀಕ್ಷೆ ನಡೆಸುವಂತೆ ತಿಳಿಸಿದೆ. ಎಎಸ್‌ಐ ತಂಡ ಮಸೀದಿ ಸಂಕೀರ್ಣದೊಳಗೆ ಸರ್ವೆ ನಡೆಸುತ್ತಿರುವ ಸಮಯದಲ್ಲೇ ಸರ್ವೋಚ್ಚ ನ್ಯಾಯಾಲಯದ ಸೋಮವಾರ ಸರ್ವೆ ವಿರಾಮಕ್ಕೆ ಆದೇಶ ಬಂದಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com