INDIA ಒಕ್ಕೂಟದ ಇತರ ಸದಸ್ಯರಿಗೆ ಮಣಿಪುರದ ಪರಿಸ್ಥಿತಿ ವಿವರಿಸಿದ 21 ಸಂಸದರ ನಿಯೋಗ

ಘರ್ಷಣೆ ಪೀಡಿತ ಮಣಿಪುರ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಲು ಸೋಮವಾರ ಮಣಿಪುರಕ್ಕೆ ತೆರಳಿದ್ದ ವಿರೋಧ ಪಕ್ಷಗಳ INDIA ಮೈತ್ರಿಕೂಟದ ಸಂಸದರು ಒಕ್ಕೂಟದ ಇತರೆ ನಾಯಕರಿಗೆ ಮಾಹಿತಿ ನೀಡಿದರು.
ಮಣಿಪುರದಲ್ಲಿ ಹಿಂಸಾಚಾರ
ಮಣಿಪುರದಲ್ಲಿ ಹಿಂಸಾಚಾರ
Updated on

ನವದೆಹಲಿ: ಘರ್ಷಣೆ ಪೀಡಿತ ಮಣಿಪುರ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಲು ಸೋಮವಾರ ಮಣಿಪುರಕ್ಕೆ ತೆರಳಿದ್ದ ವಿರೋಧ ಪಕ್ಷಗಳ INDIA ಮೈತ್ರಿಕೂಟದ ಸಂಸದರು ಒಕ್ಕೂಟದ ಇತರೆ ನಾಯಕರಿಗೆ ಮಾಹಿತಿ ನೀಡಿದರು.

ಅವರು ಸಂಸತ್ ಭವನದಲ್ಲಿ ಭೇಟಿಯಾದರು ಮತ್ತು ಮೈತ್ರಿ ಸದಸ್ಯರ ಮುಂದೆ ಮಣಿಪುರ ನೆಲದ ವಾಸ್ತವವನ್ನು ಎತ್ತಿ ತೋರಿಸಿದರು.
ನಿಯೋಗದ ಭಾಗವಾಗಿದ್ದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಣಿಪುರದ ಪರಿಸ್ಥಿತಿಯನ್ನು 'ಶ್ಮಶಾನ' ದಂತಾಗಿದೆ ಎಂದು ಬಣ್ಣಿಸಿದ್ದಾರೆ. ‘ಆಡಳಿತ ಪಕ್ಷದ ಸಂಸದರು ಅಲ್ಲಿಗೆ ಹೋಗಲಿ ಮತ್ತು ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲಿ, ಅವರು ಸಾಂದರ್ಭಿಕ ಹೇಳಿಕೆ ನೀಡುವುದಿಲ್ಲ’ ಎಂದರು.

21 ವಿರೋಧ ಪಕ್ಷದ ಸಂಸದರ ನಿಯೋಗವು ವಾರಾಂತ್ಯದಲ್ಲಿ ಮಣಿಪುರಕ್ಕೆ ತೆರಳಿ, ಪರಿಹಾರ ಶಿಬಿರಗಳಿಗೆ ಭೇಟಿ ನೀಡಿ ಹಿಂಸಾಚಾರದಿಂದ ಸಂತ್ರಸ್ತರಾದ ಜನರನ್ನು ಭೇಟಿ ಮಾಡಿತು.

ಮಣಿಪುರ ಹಿಂಸಾಚಾರದ ಕುರಿತು ಉಭಯ ಸದನಗಳಲ್ಲಿ ಚರ್ಚೆ ಮತ್ತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಲೇ ಬಂದಿವೆ.

ಅವರು ಈ ವಿಷಯದ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೇರಲು ಸಜ್ಜಾಗಿದ್ದಾರೆ ಮತ್ತು ಪ್ರಧಾನ ಮಂತ್ರಿಯಿಂದ ಹೇಳಿಕೆ ಮತ್ತು ವಿಸ್ತೃತ ಚರ್ಚೆಗೆ ಒತ್ತಾಯಿಸುತ್ತಾರೆ.

ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ವಿವಿಧ INDIA ಒಕ್ಕೂಟದ ವಿಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com