ಒಡಿಶಾದಲ್ಲಿ ಭೀಕರ ಅಪಘಾತ: 2 ರೈಲುಗಳ ನಡುವೆ ಢಿಕ್ಕಿ, ಕನಿಷ್ಠ 30 ಸಾವು, 180ಕ್ಕೂ ಅಧಿಕ ಮಂದಿಗೆ ಗಾಯ

ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 2 ರೈಲುಗಳ ನಡುವೆ ಢಿಕ್ಕಿಯಾಗಿ ಕನಿಷ್ಛ 30 ಮಂದಿ ಸಾವಿಗೀಡಾಗಿ, 180ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಒಡಿಶಾ ರೈಲು ಅಪಘಾತ
ಒಡಿಶಾ ರೈಲು ಅಪಘಾತ
Updated on

ಭುವನೇಶ್ವರ: ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 2 ರೈಲುಗಳ ನಡುವೆ ಢಿಕ್ಕಿಯಾಗಿ ಕನಿಷ್ಛ 30 ಮಂದಿ ಸಾವಿಗೀಡಾಗಿ, 180ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕೋಲ್ಕತ್ತಾದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಒಡಿಶಾದ ಬಾಲಸೋರ್‌ನ ಬಹನಾಗಾ ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದು ಸುಮಾರು ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 170 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ರಕ್ಷಣಾ ಕಾರ್ಯಾಚರಣೆ ಬಿರುಸಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಒಡಿಶಾ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಸುಧಾಂಶು ಸಾರಂಗಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಬಾಲಸೋರ್ ಮತ್ತು ಸುತ್ತಮುತ್ತಲಿನ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಿಗೆ ತುರ್ತು ಎಚ್ಚರಿಕೆ ನೀಡಲಾಗಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ನೂರಕ್ಕೂ ಹೆಚ್ಚು ಸಿಬ್ಬಂದಿ ರೈಲಿನೊಳಗೆ ಸಿಕ್ಕಿಬಿದ್ದ ಪ್ರಯಾಣಿಕರನ್ನು ಪತ್ತೆ ಹಚ್ಚುವ ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಹೇಗಾಯ್ತು ಅಪಘಾತ?
ಹೌರಾದಿಂದ ಚೆನ್ನೈಗೆ ತೆರಳುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಸಂಜೆ ಅಪಘಾತಕ್ಕೀಡಾಗಿದೆ. ಈ ರೈಲು ಒಡಿಶಾದ ಬಾಲಸೋರ್‌ನಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ 3 ಸ್ಲೀಪರ್ ಕೋಚ್‌ಗಳನ್ನು ಬಿಟ್ಟು ಉಳಿದ ಬೋಗಿಗಳು ಹಳಿತಪ್ಪಿದವು. ಆರಂಭಿಕ ಮಾಹಿತಿಯಲ್ಲಿ, ಈ ಕೋಚ್‌ಗಳ ಸಂಖ್ಯೆಯನ್ನು 18 ಎಂದು ಹೇಳಲಾಗಿದೆ.

ಈ ಬೋಗಿಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಸಿಕ್ಕಿಹಾಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ರೈಲು ಚೆನ್ನೈ ಸೆಂಟ್ರಲ್‌ನಿಂದ ಕೋಲ್ಕತ್ತಾದ ಶಾಲಿಮಾರ್ ರೈಲು ನಿಲ್ದಾಣಕ್ಕೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ.

ಘಟನೆ ಹೇಗೆ ನಡೆದಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಲಭ್ಯವಾಗಿಲ್ಲ. ಎರಡೂ ರೈಲುಗಳು ಒಂದೇ ಮಾರ್ಗದಲ್ಲಿ ಬಂದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸಿಗ್ನಲ್ ವೈಫಲ್ಯದಿಂದ ಎರಡೂ ರೈಲುಗಳು ಒಂದೇ ಹಳಿಯಲ್ಲಿ ಬಂದು ಡಿಕ್ಕಿ ಹೊಡೆದಿದೆ. ರೈಲು ಪಶ್ಚಿಮ ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಹೊರಟು ಪುರಟ್ಚಿ ತಲೈವರ್ ಡಾ. ಎಂ.ಜಿ. ಚೆನ್ನೈನ ರಾಮಚಂದ್ರನ್ ಸೆಂಟ್ರಲ್ ರೈಲು ನಿಲ್ದಾಣ ಸೇರುತ್ತದೆ. ರೈಲು ಮಧ್ಯಾಹ್ನ 3.30 ಕ್ಕೆ ತನ್ನ ಪ್ರಯಾಣವನ್ನು ಪ್ರಾರಂಭಿಸಿದ್ದು, ಸಂಜೆ 6.30 ಕ್ಕೆ ಬಾಲಸೋರ್ ನಿಲ್ದಾಣವನ್ನು ತಲುಪಿತು. ಇದು ನಾಳೆ ಸಂಜೆ 4.50ಕ್ಕೆ ಚೆನ್ನೈ ತಲುಪಬೇಕಿತ್ತು.

ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ತೆರಳಿವೆ. ಪ್ರಸ್ತುತ ಸ್ಥಳಗದಲ್ಲಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಮತ್ತು ಎಸ್‌ಆರ್‌ಸಿಗೆ ರಾಜ್ಯ ಮಟ್ಟದಿಂದ ಯಾವುದೇ ಹೆಚ್ಚುವರಿ ಸಹಾಯದ ಅಗತ್ಯವಿದ್ದರೆ ಸ್ಥಳಕ್ಕೆ ತಲುಪಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ ಎಂದು ವಿಶೇಷ ಪರಿಹಾರ ಆಯುಕ್ತರ ಕಚೇರಿ ಹೇಳಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com