ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ 'ಅಕ್ರಮ' ವಾಣಿಜ್ಯ ಸಂಕೀರ್ಣ ತೆರವು ಕಾರ್ಯಾಚರಣೆ ವಿರುದ್ಧ ಪ್ರತಿಭಟನೆ!

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ 'ಅಕ್ರಮ' ವಾಣಿಜ್ಯ ಸಂಕೀರ್ಣಗಳ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದು ಇದರ ಬೆನ್ನಲ್ಲೇ ಆಡಳಿತದ ವಿರುದ್ಧ ವ್ಯಾಪಾರಿಗಳನ್ನು ಪ್ರತಿಭಟನೆ ನಡೆಸಿದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ 'ಅಕ್ರಮ' ವಾಣಿಜ್ಯ ಸಂಕೀರ್ಣಗಳ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದು ಇದರ ಬೆನ್ನಲ್ಲೇ ಆಡಳಿತದ ವಿರುದ್ಧ ವ್ಯಾಪಾರಿಗಳನ್ನು ಪ್ರತಿಭಟನೆ ನಡೆಸಿದರು.

ಯಾವುದೇ ನೋಟಿಸ್ ನೀಡದೆ ಕಟ್ಟಡ ಕೆಡವುವ ಕಾರ್ಯ ನಡೆದಿದೆ ಎಂದು ಕಟ್ಟಡ ಮಾಲೀಕರು ಆರೋಪಿಸಿದ್ದಾರೆ. ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಶುಕ್ರವಾರ ವಿಚಾರಣೆಯನ್ನು ನಿಗದಿಪಡಿಸಲಾಗಿದೆ ಎಂದು ವ್ಯಾಪಾರಿಗಳು ಹೇಳಿದರು.

ಕಥುವಾ ಮುನ್ಸಿಪಲ್ ಕೌನ್ಸಿಲ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಂತೋಷ್ ಕೊತ್ವಾಲ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ, ಸಿಬ್ಬಂದಿಗಳು ಮತ್ತು ಯಂತ್ರಗಳ ಭಾರೀ ನಿಯೋಜನೆಯ ನಡುವೆ, ಶಾಹಿದಿ ಚೌಕ್ ರಸ್ತೆಯಲ್ಲಿರುವ ಆವರಣದಲ್ಲಿ ಧ್ವಂಸ ಕಾರ್ಯವನ್ನು ಕೈಗೊಳ್ಳಲು ಪ್ರಯತ್ನಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಕಟ್ಟಡದ ಮಾಲೀಕ ಮೊಹಿಂದರ್ ಮಹಾಜನ್ ಸ್ಥಳಕ್ಕಾಗಮಿಸಿ ಸರ್ಕಾರದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಡೆಮಾಲಿಷನ್ ನೋಟಿಸ್ ತೋರಿಸುವಂತೆ ಸಿಇಒಗೆ ಸೂಚಿಸಿದರು. ಸಿಇಒ ಅದನ್ನು ಪ್ರಸ್ತುತಪಡಿಸಲು ವಿಫಲರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರ ಪರಿಣಾಮವಾಗಿ ವ್ಯಾಪಾರಿಗಳ ಸಮುದಾಯದ ಪ್ರತಿಭಟನೆಗೆ ಕಾರಣವಾಯಿತು. 

ಕಟ್ಟಡವನ್ನು ಅಕ್ರಮವಾಗಿ ನಿರ್ಮಿಸಲು ಕಟ್ಟಡದ ಮಾಲೀಕರು ಅಧಿಕಾರಿಗಳಿಗೆ ಲಂಚ ನೀಡಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದರು. ಇದರ ಪರಿಣಾಮವಾಗಿ ಮಾಲೀಕರು ಮತ್ತು ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ನಡೆಯಿತು. ಎರಡೂ ಕಡೆಯವರ ನಡುವೆ ಘರ್ಷಣೆ ತಪ್ಪಿಸಲು ಪೊಲೀಸರು ಮಧ್ಯಪ್ರವೇಶ ಮಾಡಬೇಕಾಯಿತು.

ವ್ಯಾಪಾರ ಮಂಡಳಿ ಕಥುವಾ ಬೆಳವಣಿಗೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಸಂಘಟನೆಯ ಸದಸ್ಯರು ಕಥುವಾ ಜಿಲ್ಲಾಧಿಕಾರಿ ರಾಕೇಶ್ ಮಿನ್ಹಾಸ್ ವಿರುದ್ಧ ಧರಣಿ ನಡೆಸಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com