ಒಡಿಶಾ ಭೀಕರ ರೈಲು ಅಪಘಾತ: ಗಾಯಾಳುಗಳಿಗೆ ರಕ್ತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ಜನರು!

ಒಡಿಶಾದಲ್ಲಿ ಕನಿಷ್ಠ 233 ಮಂದಿಯನ್ನು ಬಲಿ ತೆಗೆದುಕೊಂಡ ಭೀಕರ ರೈಲು ಅಪಘಾತದ ನಂತರ, ಬಾಲಸೋರ್‌ನಲ್ಲಿ ಗಾಯಗೊಂಡವರಿಗೆ ರಕ್ತದಾನ ಮಾಡಲು ಜನರು ಸರತಿ ಸಾಲಿನಲ್ಲಿ ನಿಂತಿದ್ದರು.
ರೈಲು ದುರಂತದಲ್ಲಿ ಗಾಯಗೊಂಡವರಿಗೆ ರಕ್ತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿರುವ ಜನರು
ರೈಲು ದುರಂತದಲ್ಲಿ ಗಾಯಗೊಂಡವರಿಗೆ ರಕ್ತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿರುವ ಜನರು

ಬಾಲಸೋರ್‌: ಒಡಿಶಾದಲ್ಲಿ ಕನಿಷ್ಠ 233 ಮಂದಿಯನ್ನು ಬಲಿ ತೆಗೆದುಕೊಂಡ ಭೀಕರ ರೈಲು ಅಪಘಾತದ ನಂತರ, ಬಾಲಸೋರ್‌ನಲ್ಲಿ ಗಾಯಗೊಂಡವರಿಗೆ ರಕ್ತದಾನ ಮಾಡಲು ಜನರು ಸರತಿ ಸಾಲಿನಲ್ಲಿ ನಿಂತಿದ್ದರು.

ಅಧಿಕಾರಿಗಳ ಪ್ರಕಾರ, ಈವರೆಗೆ 233 ಜನರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 900 ಜನರು ಗಾಯಗೊಂಡಿದ್ದಾರೆ. ಈಮಧ್ಯೆ, ರೈಲು ಹಳಿತಪ್ಪಿದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಶನಿವಾರ ಶೋಕಾಚರಣೆಯನ್ನು ಘೋಷಿಸಿದೆ.

'ಈ ಅಪಘಾತ ಸಂಭವಿಸಿದಾಗ ನಾನು ಹತ್ತಿರದಲ್ಲಿದ್ದೆ. ನಾವು ಸುಮಾರು 200-300 ಜನರನ್ನು ರಕ್ಷಿಸಿದ್ದೇವೆ' ಎಂದು ಸ್ಥಳೀಯರಾದ ಗಣೇಶ್ ಸುದ್ದಿ ಸಂಸ್ಥೆ ಎಎನ್ಐ ಜೊತೆಗೆ ಮಾತನಾಡುತ್ತಾ ಹೇಳಿದರು.

ಕಳೆದ ರಾತ್ರಿಯಿಂದ ನಾವು ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಕೋಲ್ಕತ್ತಾದಿಂದ ಹೆಚ್ಚಿನ ಸೇನಾ ಸಿಬ್ಬಂದಿ ಆಗಮಿಸಲಿದ್ದಾರೆ ಎಂದು ಭಾರತೀಯ ಸೇನೆಯ ಕರ್ನಲ್ ಎಸ್‌ಕೆ ದತ್ತಾ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗೆ ನೆರವಾಗುವಂತೆ ಒಟ್ಟು ಸುಮಾರು 200 ಆಂಬ್ಯುಲೆನ್ಸ್‌ಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಇದರೊಂದಿಗೆ ಎಸ್‌ಸಿಬಿಯ 25 ವೈದ್ಯರ ತಂಡದೊಂದಿಗೆ 50 ಹೆಚ್ಚುವರಿ ವೈದ್ಯರನ್ನೂ ಸಜ್ಜುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಅಧಿಕಾರಿಗಳ ಪ್ರಕಾರ, ಮೃತದೇಹದ ವಿಲೇವಾರಿ ಮೇಲ್ವಿಚಾರಣೆಗಾಗಿ PRM MCH, ಬರಿಪದ ಮತ್ತು SCB MCH ನಿಂದ ಸಜ್ಜುಗೊಂಡ ವಿಧಿವಿಜ್ಞಾನ ಔಷಧ ತಜ್ಞರನ್ನು ನಿಯೋಜಿಸಲಾಗಿದೆ.

ಆರೋಗ್ಯ ಸೇವೆಗಳ ನಿರ್ದೇಶಕರು, ರಕ್ತ ಸುರಕ್ಷತಾ ನಿರ್ದೇಶಕರು, ಹೆಚ್ಚುವರಿ DMET ಮತ್ತು ಇತರ ಮೂವರು ಹೆಚ್ಚುವರಿ ನಿರ್ದೇಶಕರು ಬಾಲಸೋರ್‌ನಲ್ಲಿದ್ದಾರೆ ಮತ್ತು ಆರೋಗ್ಯ ತಂಡಗಳೊಂದಿಗೆ ಸಮನ್ವಯಗೊಳಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com