ನವದಂಪತಿಯ ಅಂತ್ಯಕ್ರಿಯೆ
ನವದಂಪತಿಯ ಅಂತ್ಯಕ್ರಿಯೆ

ಉತ್ತರಪ್ರದೇಶ: ಮೊದಲ ರಾತ್ರಿ ದಿನವೇ ಹೃದಯಾಘಾತದಿಂದ ನವದಂಪತಿ ಸಾವು!

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ವಿವಾಹವಾದ ಒಂದು ದಿನದ ನಂತರ ನವವಿವಾಹಿತರು ಶವವಾಗಿ ಪತ್ತೆಯಾಗಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವಧು-ವರರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಬಂದಿದ್ದು ಇದು ನಿಗೂಢತೆಯನ್ನು ಹೆಚ್ಚಿಸಿದೆ.
Published on

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ವಿವಾಹವಾದ ಒಂದು ದಿನದ ನಂತರ ನವವಿವಾಹಿತರು ಶವವಾಗಿ ಪತ್ತೆಯಾಗಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವಧು-ವರರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಬಂದಿದ್ದು ಇದು ನಿಗೂಢತೆಯನ್ನು ಹೆಚ್ಚಿಸಿದೆ.

ಮೇ 30ರಂದು ಇಪ್ಪತ್ತೆರಡು ವರ್ಷದ ಪ್ರತಾಪ್ ಯಾದವ್ 20 ವರ್ಷದ ಪುಷ್ಪಾ ಅವರನ್ನು ವಿವಾಹವಾಗಿದ್ದರು. ಮದುವೆಯಾದ ನಂತರ ಗಂಡ ಹೆಂಡತಿ ಇಬ್ಬರೂ ತಮ್ಮ ಕೋಣೆಗೆ ಹೋಗಿದ್ದು ಆದರೆ ಮರುದಿನ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಎರಡೂ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು.

ಪತಿ-ಪತ್ನಿ ಇಬ್ಬರೂ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಪ್ರಶಾಂತ್ ವರ್ಮಾ ತಿಳಿಸಿದ್ದಾರೆ.

ನವವಿವಾಹಿತ ದಂಪತಿಗಳಾದ ಪ್ರತಾಪ್ ಮತ್ತು ಪುಷ್ಪಾ ಅವರನ್ನು ಅಪಾರ ಜನಸ್ತೋಮದ ನಡುವೆ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com