ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧದ ಲೈಂಗಿಕ ಕಿರುಕುಳ ಆರೋಪದಿಂದ ಹಿಂದೆ ಸರಿದಿಲ್ಲ: ಅಪ್ರಾಪ್ತ ಕುಸ್ತಿಪಟುವಿನ ತಂದೆ

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪವನ್ನು ಹೊರಿಸಿದ 17 ವರ್ಷದ ಕುಸ್ತಿಪಟುವಿನ ತಂದೆ ಭಾನುವಾರ ತಡರಾತ್ರಿ ತಾನು ಆರೋಪದಿಂದ ಹಿಂದೆ ಸರಿದಿಲ್ಲ ಎಂದು ಪ್ರತಿಪಾದಿಸಿದ್ದಾರೆ.
ಕುಸ್ತಿಪಟುಗಳ ಪ್ರತಿಭಟನೆ
ಕುಸ್ತಿಪಟುಗಳ ಪ್ರತಿಭಟನೆ

ನವೆದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪವನ್ನು ಹೊರಿಸಿದ 17 ವರ್ಷದ ಕುಸ್ತಿಪಟುವಿನ ತಂದೆ ಭಾನುವಾರ ತಡರಾತ್ರಿ ತಾನು ಆರೋಪದಿಂದ ಹಿಂದೆ ಸರಿದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಐಎಎನ್ಎಸ್‌ನೊಂದಿಗೆ ಮಾತನಾಡಿದ ಸಂತ್ರಸ್ತೆಯ ತಂದೆ, ತಮ್ಮ ಹೇಳಿಕೆಯನ್ನು (ಆರೋಪಗಳ ಮೇಲೆ) 'ಹಿಂತೆಗೆದುಕೊಳ್ಳುವ' ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ನಕಲಿ ಎಂದು ಪ್ರತಿಪಾದಿಸಿದ್ದಾರೆ.

'ನಾವು ನಮ್ಮ ಹೇಳಿಕೆಗೆ ಬದ್ಧವಾಗಿದ್ದೇವೆ ಮತ್ತು ನಾನೀಗ ಹೊರಗಿನ ಪ್ರದೇಶದಲ್ಲಿದ್ದೇನೆ ಮತ್ತು ದೆಹಲಿ ಅಥವಾ ಹರಿಯಾಣದಲ್ಲಿಲ್ಲ' ಎಂದು ಈ ವಿಷಯದ ಬಗ್ಗೆ ಹರಡುತ್ತಿರುವ ಊಹಾಪೋಹಗಳನ್ನು ಕೊನೆಗೊಳಿಸಲು ಪ್ರಯತ್ನಿಸಿದರು.

ಎರಡು ದಿನಗಳ ಹಿಂದೆ, ರೈತರು ಮತ್ತು ಖಾಪ್ ಪಂಚಾಯತ್‌ಗಳ ಪ್ರತಿನಿಧಿಗಳು (ಸಮುದಾಯ ನ್ಯಾಯಾಲಯಗಳು) ಜೂನ್ 9 ರೊಳಗೆ ಸಿಂಗ್ ಅವರನ್ನು ಬಂಧಿಸಬೇಕು. ಇಲ್ಲದಿದ್ದರೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.

ಕುಸ್ತಿಪಟುಗಳ ಪ್ರತಿಭಟನೆಯ ಭವಿಷ್ಯದ ಕಾರ್ಯತಂತ್ರದ ಕುರಿತು ಹರಿಯಾಣದ ಕುರುಕ್ಷೇತ್ರ ಪಟ್ಟಣದಲ್ಲಿ ನಡೆದ 'ಮಹಾಪಂಚಾಯತ್'ನಲ್ಲಿ ಈ ನಿಟ್ಟಿನಲ್ಲಿ ಸಾಮೂಹಿಕ ಮತ್ತು ಸರ್ವಾನುಮತದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಜೂನ್ 1 ರಂದು ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ 'ಮಹಾಪಂಚಾಯತ್' ನಡೆಯಿತು. ಅಲ್ಲಿ ಕುಸ್ತಿಪಟುಗಳಿಗೆ ನ್ಯಾಯ ಕೇಳಲು ನಿಯೋಗವು ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ನಿರ್ಧರಿಸಲಾಯಿತು.

ಕುರುಕ್ಷೇತ್ರ ಮಹಾಪಂಚಾಯತ್‌ನಲ್ಲಿ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಅವರು ಜೂನ್ 9 ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅವಕಾಶ ನೀಡದಿದ್ದರೆ, 'ಸತ್ಯಾಗ್ರಹದ ಘೋಷಣೆ ಮಾಡಲಾಗುವುದು' ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮೇ 28 ರಂದು ಹೊಸ ಸಂಸತ್ ಭವನದ ಉದ್ಘಾಟನೆ ದಿನ ಕುಸ್ತಿಪಟುಗಳ ಮೆರವಣಿಗೆಯ ವೇಳೆ ಮಾನವೀಯತೆ ಮರೆತು ಕುಸ್ತಿಪಟುಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.
ಅದೇ ದಿನ, ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ತಮ್ಮ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com