ಒಡಿಶಾ ರೈಲು ದುರಂತ: 40 ಪ್ರಯಾಣಿಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರಬಹುದು

ಒಡಿಶಾದ ಬಾಲಸೋರ್‌ನಲ್ಲಿ ಅಪಘಾತಕ್ಕೀಡಾದ ಕೋರಮಂಡಲ್ ಎಕ್ಸ್‌ಪ್ರೆಸ್‌ ರೈಲಿನಿಂದ ವಶಪಡಿಸಿಕೊಂಡ ಸುಮಾರು 40 ಮೃತದೇಹಗಳಿಗೆ ಯಾವುದೇ ಗಾಯಗಳಾಗಿಲ್ಲ. ಹೀಗಾಗಿ ಈ 40 ಪ್ರಯಾಣಿಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ ಎಂದು ಜಿಆರ್‌ಪಿ ತಿಳಿಸಿದೆ
ಕಳೆದ ಶುಕ್ರವಾರ ಅಪಘಾತ ಸಂಭವಿಸಿದ ನಂತರದ ದೃಶ್ಯ
ಕಳೆದ ಶುಕ್ರವಾರ ಅಪಘಾತ ಸಂಭವಿಸಿದ ನಂತರದ ದೃಶ್ಯ
Updated on

ಭುವನೇಶ್ವರ: ಒಡಿಶಾದ ಬಾಲಸೋರ್‌ನಲ್ಲಿ ಭೀಕರ ಅಪಘಾತಕ್ಕೀಡಾದ ಕೋರಮಂಡಲ್ ಎಕ್ಸ್‌ಪ್ರೆಸ್‌ ರೈಲಿನಿಂದ ವಶಪಡಿಸಿಕೊಂಡ ಸುಮಾರು 40 ಮೃತದೇಹಗಳಿಗೆ ಯಾವುದೇ ಗಾಯಗಳಾಗಿಲ್ಲ. ಹೀಗಾಗಿ ಈ 40 ಪ್ರಯಾಣಿಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ ಎಂದು ಜಿಆರ್‌ಪಿ ತಿಳಿಸಿದೆ.

ಬಾಲಸೋರ್‌ನ ಸರ್ಕಾರಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ನಲ್ಲಿ, ಅಪಘಾತ ಸಂಭವಿಸಿದಾಗ ಲೈವ್ ಓವರ್‌ಹೆಡ್ ವೈರ್‌ಗಳು ತುಂಡಾಗಿ, ಕೆಲವು ಬೋಗಿಗಳಿಗೆ ಸಿಕ್ಕಿಹಾಕಿಕೊಂಡಿದೆ. ಈ ಬೋಗಿಗಳಲ್ಲಿದ್ದ ಪ್ರಯಾಣಿಕರಿಗೆ ವಿದ್ಯುತ್ ತಗುಲಿದೆ ಎಂದು ಉಲ್ಲೇಖಿಸಲಾಗಿದೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪಿ ಕುಮಾರ್ ನಾಯಕ್ ತಮ್ಮ ಎಫ್‌ಐಆರ್‌ನಲ್ಲಿ, "ಓವರ್‌ಹೆಡ್ ಎಲ್‌ಟಿ (ಲೋ ಟೆನ್ಷನ್) ಲೈನ್‌ ತುಂಡಾಗಿ ಉಂಟಾದ ಗಾಯಗಳಿಂದ ಅನೇಕ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಹೌರಾ-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಸ್ಟೇಷನರಿ ಗೂಡ್ಸ್ ರೈಲು ಒಳಗೊಂಡ ತ್ರಿವಳಿ ರೈಲು ಅಪಘಾತದಲ್ಲಿ 278 ಜನ ಮೃತಪಟ್ಟಿದ್ದಾರೆ ಮತ್ತು 1200 ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com