ವಂದೇ ಭಾರತ್ ಎಕ್ಸ್ ಪ್ರೆಸ್
ವಂದೇ ಭಾರತ್ ಎಕ್ಸ್ ಪ್ರೆಸ್

ಜೂನ್ 26 ರಂದು ಬೆಂಗಳೂರು-ಹುಬ್ಬಳ್ಳಿ ಸೇರಿದಂತೆ ಐದು ಹೊಸ ವಂದೇ ಭಾರತ್ ರೈಲಿಗೆ ಚಾಲನೆ

ಜೂನ್ 2 ರಂದು ಒಡಿಶಾದಲ್ಲಿ 289 ಜನರನ್ನು ಬಲಿ ಪಡೆದ ತ್ರಿವಳಿ ರೈಲು ಅಪಘಾತದ ನಂತರ ಭಾರತೀಯ ರೈಲ್ವೆ ಜೂನ್ 26 ರಿಂದ ಐದು ಮಾರ್ಗಗಳಲ್ಲಿ ಐದು ಹೊಸ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸಲಿದೆ.
Published on

ನವದೆಹಲಿ: ಜೂನ್ 2 ರಂದು ಒಡಿಶಾದಲ್ಲಿ 289 ಜನರನ್ನು ಬಲಿ ಪಡೆದ ತ್ರಿವಳಿ ರೈಲು ಅಪಘಾತದ ನಂತರ ಭಾರತೀಯ ರೈಲ್ವೆ ಜೂನ್ 26 ರಿಂದ ಐದು ಮಾರ್ಗಗಳಲ್ಲಿ ಐದು ಹೊಸ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಐದು ಸೆಮಿ ಹೈಸ್ಪೀಡ್ ರೈಲುಗಳಿಗೆ ಚಾಲನೆ ನೀಡುವ ನಿರೀಕ್ಷೆ ಇದೆ.

ಐದು ವಂದೇ ಭಾರತ್ ರೈಲುಗಳು ಚಲಿಸುವ ಮಾರ್ಗಗಳೆಂದರೆ - ಮುಂಬೈ-ಗೋವಾ, ಬೆಂಗಳೂರು-ಹುಬ್ಬಳ್ಳಿ, ಪಾಟ್ನಾ-ರಾಂಚಿ, ಭೋಪಾಲ್-ಇಂಧೋರ್ ಮತ್ತು ಭೋಪಾಲ್-ಜಬಲ್ಪುರ.

ಒಡಿಶಾ ದುರಂತದ ನಂತರ ರೈಲ್ವೆ ಸಚಿವಾಲಯವು ಮುಂಬೈ-ಗೋವಾ ವಂದೇ ಭಾರತ್ ರೈಲಿನ ಉದ್ಘಾಟನೆಯನ್ನು ರದ್ದುಗೊಳಿಸಿತ್ತು. ಒಂದೇ ದಿನದಲ್ಲಿ ಐದು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡುತ್ತಿರುವುದು ಇದೇ ಮೊದಲು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com