ತಮಿಳುನಾಡು ಸಚಿವ ಬಾಲಾಜಿ ಖಾತೆಗಳನ್ನು ಮರುಹಂಚಿಕೆ ಮಾಡಿದ ರಾಜ್ಯಪಾಲರು

ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರು ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಖಾತೆಗಳನ್ನು ಇತರ ಸಚಿವರಿಗೆ ಮರು ಹಂಚಿಕೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಸೆಂಥಿಲ್ ಬಾಲಾಜಿ ಆರೋಗ್ಯ ವಿಚಾರಿಸಿದ ತಮಿಳುನಾಡು ಸಿಎಂ ಸ್ಟಾಲಿನ್
ಸೆಂಥಿಲ್ ಬಾಲಾಜಿ ಆರೋಗ್ಯ ವಿಚಾರಿಸಿದ ತಮಿಳುನಾಡು ಸಿಎಂ ಸ್ಟಾಲಿನ್

ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರು ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಖಾತೆಗಳನ್ನು ಇತರ ಸಚಿವರಿಗೆ ಮರು ಹಂಚಿಕೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಲಾಯದಿಂದ ಬಂಧನಕ್ಕೊಳಗಾಗಿರುವ ಸೆಂಥಿಲ್ ಬಾಲಾಜಿ ಅವರನ್ನು ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರಿಸಲು ರಾಜ್ಯಪಾಲರು "ಸಮ್ಮತಿ ನೀಡಿಲ್ಲ".  ಏಕೆಂದರೆ ಅವರು ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ ಎಂದು ರಾಜಭವನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಬಾಲಾಜಿ ಅವರ ಬಳಿ ಇದ್ದ ಇಂಧನ ಹಾಗೂ ಅಬಕಾರಿ ಖಾತೆಗಳನ್ನು ತಂಗಮ್‌ ತೆನ್ನರಸು ಹಾಗೂ ಎಸ್‌ ಮುತ್ತುಸ್ವಾಮಿ ಅವರಿಗೆ ಮರು ಹಂಚಿಕೆ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.

ಬಂಧಿತ ತಮಿಳುನಾಡು ಅಬಕಾರಿ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಚೆನ್ನೈ ನ ಸ್ಥಳೀಯ ನ್ಯಾಯಾಲಯ ಜೂ.28 ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com