ಹಿಂಸಾಚಾರ: ರಾಜ್ಯ ಚುನಾವಣಾ ಆಯುಕ್ತರಿಂದ ಮಾಹಿತಿ ಪಡೆದ ಪಶ್ಚಿಮ ಬಂಗಾಳ ರಾಜ್ಯಪಾಲರು

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಹಿಂಸಾಚಾರ ಪೀಡಿತ ಭಂಗೋರ್‌ಗೆ ಭೇಟಿ ನೀಡಿದ ಒಂದು ದಿನದ ನಂತರ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ರಾಜ್ಯ ಚುನಾವಣಾ ಆಯುಕ್ತ (ಎಸ್‌ಇಸಿ) ರಾಜೀವ ಸಿನ್ಹಾ ಅವರನ್ನು ಶನಿವಾರ..
ರಾಜ್ಯಪಾಲ ಆನಂದ್ ಬೋಸ್
ರಾಜ್ಯಪಾಲ ಆನಂದ್ ಬೋಸ್
Updated on

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಹಿಂಸಾಚಾರ ಪೀಡಿತ ಭಂಗೋರ್‌ಗೆ ಭೇಟಿ ನೀಡಿದ ಒಂದು ದಿನದ ನಂತರ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ರಾಜ್ಯ ಚುನಾವಣಾ ಆಯುಕ್ತ (ಎಸ್‌ಇಸಿ) ರಾಜೀವ ಸಿನ್ಹಾ ಅವರನ್ನು ಶನಿವಾರ ರಾಜಭವನಕ್ಕೆ ಕರೆಸಿಕೊಂಡು ಪರಿಸ್ಥಿತಿಯ ಬಗ್ಗೆ ವಿವರಿಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದಲ್ಲಿ ನಾಲ್ಕು ಜೀವಗಳನ್ನು ಬಲಿತೆಗೆದುಕೊಂಡ ಹಿಂಸಾಚಾರ ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲು ಸಿನ್ಹಾ ಅವರನ್ನು ಬೋಸ್ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಿಂಸಾಚಾರದ ಹಿನ್ನೆಲೆಯಲ್ಲಿ ಪ್ರಸ್ತುತ ಪರಿಸ್ಥಿತಿಯ ಮಾಹಿತಿ ಪಡೆಯಲು ರಾಜ್ಯಪಾಲರು ಸಿನ್ಹಾ ಅವರನ್ನು ಮಧ್ಯಾಹ್ನ 2 ಗಂಟೆಗೆ ಕರೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುಕ್ರವಾರ ಭಂಗೋರ್‌ಗೆ ಭೇಟಿ ನೀಡಿದ ನಂತರ, ರಾಜ್ಯಪಾಲರು ರಾಜಕೀಯ ಹಿಂಸಾಚಾರವನ್ನು ಕೊನೆಗೊಳಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು.

ಅಲ್ಲಿನ ನಿವಾಸಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ ನಂತರ, ಅವರು ಹಿಂಸಾಚಾರವನ್ನು ಸಹಿಸುವುದಿಲ್ಲ ಎಂದು ಬೋಸ್ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com