ಎಎಪಿ ಸರ್ಕಾರದ ಅಡಿಯಲ್ಲಿ ಕಾನೂನು ಸುವ್ಯವಸ್ಥೆ ಇದ್ದಿದ್ದರೆ ದೆಹಲಿ ಅತ್ಯಂತ ಸುರಕ್ಷಿತವಾಗಿರುತ್ತಿತ್ತು: ಅರವಿಂದ ಕೇಜ್ರಿವಾಲ್

ಲೆಫ್ಟಿನೆಂಟ್ ಗವರ್ನರ್ ಬದಲಿಗೆ ಎಎಪಿ ಸರ್ಕಾರದ ಅಡಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಇದ್ದಿದ್ದರೆ ರಾಷ್ಟ್ರ ರಾಜಧಾನಿ ಸುರಕ್ಷಿತ ಸ್ಥಳವಾಗುತ್ತಿತ್ತು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್

ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ಬದಲಿಗೆ ಎಎಪಿ ಸರ್ಕಾರದ ಅಡಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಇದ್ದಿದ್ದರೆ ರಾಷ್ಟ್ರ ರಾಜಧಾನಿ ಸುರಕ್ಷಿತ ಸ್ಥಳವಾಗುತ್ತಿತ್ತು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.

ಭಾನುವಾರ ಬೆಳಗ್ಗೆ ನೈಋತ್ಯ ದೆಹಲಿಯ ಆರ್‌ಕೆ ಪುರಂನಲ್ಲಿ ಇಬ್ಬರು ಮಹಿಳೆಯರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

'ನಮ್ಮ ಆಲೋಚನೆಗಳು ಇಬ್ಬರು ಮಹಿಳೆಯರ ಕುಟುಂಬಗಳೊಂದಿಗೆ ಇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ದೆಹಲಿಯ ಜನರು ಸಾಕಷ್ಟು ಅಭದ್ರತೆಯ ಭಾವನೆಯನ್ನು ಅನುಭವಿಸುತ್ತಿದ್ದಾರೆ. ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸುವ ಜವಾಬ್ದಾರಿ ಹೊತ್ತಿರುವವರು ಪರಿಸ್ಥಿತಿಯನ್ನು ಸರಿಪಡಿಸುವ ಬದಲು ದೆಹಲಿ ಸರ್ಕಾರವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಪಿತೂರಿ ನಡೆಸುತ್ತಿದ್ದಾರೆ' ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

'ಎಲ್‌ಜಿ ಬದಲಿಗೆ ಎಎಪಿ ಅಡಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ ಇದ್ದಿದ್ದರೆ, ದೆಹಲಿಯು ಅತ್ಯಂತ ಸುರಕ್ಷಿತವಾಗಿರುತ್ತಿತ್ತು' ಎಂದು ಅವರು ಹೇಳಿದರು.

ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಆರೋಪಿಸಿ ಎಎಪಿ ಈ ಹಿಂದೆ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ವಿರುದ್ಧ ವಾಗ್ದಾಳಿ ನಡೆಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com