ಛತ್ತೀಸ್‌ಗಢ: ಸೇತುವೆಗೆ ಡಿಕ್ಕಿ ಹೊಡೆದ ಬಸ್, 26 ಮಂದಿಗೆ ಗಾಯ

ಬಸ್ ವೊಂದು ಸೇತವೆಗೆ ಡಿಕ್ಕೆ ಹೊಡೆದ ಪರಿಣಾಮ ಕನಿಷ್ಠ 26 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ಘರ್‌ಘೋಡಾ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ಸೇತುವೆಗೆ ಡಿಕ್ಕಿ ಹೊಡೆದು ಜಖಂಗೊಂಡಿರುವ ಬಸ್.
ಸೇತುವೆಗೆ ಡಿಕ್ಕಿ ಹೊಡೆದು ಜಖಂಗೊಂಡಿರುವ ಬಸ್.

ರಾಯ್‌ಗಢ (ಛತ್ತೀಸ್‌ಗಢ): ಬಸ್ ವೊಂದು ಸೇತವೆಗೆ ಡಿಕ್ಕೆ ಹೊಡೆದ ಪರಿಣಾಮ ಕನಿಷ್ಠ 26 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ಘರ್‌ಘೋಡಾ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ಇದ್ದಕ್ಕಿದ್ದಂತೆಯೇ ಸೇತುವೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾ ಬಸ್ ನಲ್ಲಿದ್ದ 26 ಮಂದಿ ಗಾಯಗೊಂಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ರಾಯ್‌ಗಢ ವೈದ್ಯಕೀಯ ಕಾಲೇಜಿಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ 26 ಮಂದಿಯ ಪೈಕಿ, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 
ಈ ಹಿಂದೆ ಮೇ 24 ರಂದು ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯಲ್ಲಿ ಸಿಟಿ ಬಸ್ ವೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದರು. ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ರಾಯ್‌ಗಢ್ ಜಿಲ್ಲೆಯ ಘರ್ಘೋಡಾ-ಚಾರ್ಭಟಾ ತಿರುವಿನಲ್ಲಿ ಈ ಘಟನೆ ನಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com