ಕಾರ್ಕಳದಲ್ಲಿ ಕಾರು ಅಪಘಾತ: ತೆಲಂಗಾಣ ಸಚಿವ ರೋಹಿತ್ ರೆಡ್ಡಿ ಪ್ರಾಣಾಪಾಯದಿಂದ ಪಾರು!

ಕರ್ನಾಟಕದ ಕಾರ್ಕಳದಲ್ಲಿ ಕಾರು ಅಪಘಾತ ಸಂಭವಿಸಿದ್ದು, ತೆಲಂಗಾಣ ಸಚಿವ ರೋಹಿತ್ ರೆಡ್ಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಕಳದಲ್ಲಿ ತೆಲಂಗಾಣ ಸಚಿವರ ಕಾರು ಅಪಘಾತ
ಕಾರ್ಕಳದಲ್ಲಿ ತೆಲಂಗಾಣ ಸಚಿವರ ಕಾರು ಅಪಘಾತ
Updated on

ಉಡುಪಿ: ಕರ್ನಾಟಕದ ಕಾರ್ಕಳದಲ್ಲಿ ಕಾರು ಅಪಘಾತ ಸಂಭವಿಸಿದ್ದು, ತೆಲಂಗಾಣ ಸಚಿವ ರೋಹಿತ್ ರೆಡ್ಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ತೆಲಂಗಾಣ ಶಾಸಕ ರೋಹಿತ್ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಬಳಿ ನಡೆದಿದೆ. ಶಾಸಕ ರೋಹಿತ್ ರೆಡ್ಡಿ ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದರು. ವೇಗವಾಗಿ ಸಾಗುತ್ತಿದ್ದಾಗ ಟಯರ್ ಸ್ಫೋಟಗೊಂಡು ಕಾರು ಮರಕ್ಕೆ ಡಿಕ್ಕಿಯಾಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ್ದು, ಸಚಿವ ರೋಹಿತ್ ರೆಡ್ಡಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದ ಮಿಯೂರ್ ಸಮೀಪದ ಮೂದರ್-ನಲ್ಲೂರು ಕ್ರಾಸ್ ಹತ್ತಿರ ಈ ಘಟನೆ ನಡೆದಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಕಾರ್ಕಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com