ದೇಶದಾದ್ಯಂತ ಮುಸಲ್ಮಾನರ ಪವಿತ್ರ ಹಬ್ಬ ಬಕ್ರೀದ್ ಆಚರಣೆ: ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ

ದೇಶದಾದ್ಯಂತ ಗುರುವಾರ ಈದ್ ಉಲ್ ಅಧಾ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ಕೋರಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ದೇಶದಾದ್ಯಂತ ಗುರುವಾರ ಈದ್ ಉಲ್ ಅಧಾ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಈದ್-ಉಜ್-ಜುಹಾ ಈ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಈದ್-ಉಜ್-ಜುಹಾ ಪ್ರೀತಿ, ತ್ಯಾಗದ ಪವಿತ್ರ ಹಬ್ಬವಾಗಿದೆ. ಈ ಹಬ್ಬವು ಪರಿತ್ಯಾಗದ ಮಾರ್ಗವನ್ನು ಅನುಸರಿಸಲು ಮತ್ತು ಮಾನವೀಯತೆಯ ಸೇವೆಯನ್ನು ನಿಸ್ವಾರ್ಥವಾಗಿ ಮಾಡಲು ಪ್ರೇರೇಪಿಸುತ್ತದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಪರಸ್ಪರ ಸೌಹಾರ್ದತೆಯನ್ನು ಹೆಚ್ಚಿಸಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್ ಮಾಡಿ, ಈದ್-ಉಲ್-ಅಧಾದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ ಈದ್ ಮುಬಾರಕ್ ಎಂದು ಶುಭಾಶಯಗಳನ್ನು ತಿಳಿಸಿದ್ದಾರೆ.

ಬಕ್ರೀದ್ ತ್ಯಾಗದ ಹಬ್ಬ. ಇದು ಇಸ್ಲಾಮಿಕ್ ಸಮುದಾಯವು ಆಚರಿಸುವ ಎರಡನೇ ಪ್ರಮುಖ ಹಬ್ಬವಾಗಿದೆ. ಈ ದಿನವನ್ನು ಪ್ರವಾದಿ ಇಬ್ರಾಹಿಂ ಅವರು ತಮ್ಮ ಮಗನ ತ್ಯಾಗವನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಈದ್ ಉಲ್ ಅಧಾವನ್ನು ಆಚರಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com