ಉಕ್ರೇನ್‌ನಲ್ಲಿ ಸಮಗ್ರ, ನ್ಯಾಯಯುತ ಮತ್ತು ಶಾಶ್ವತ ಶಾಂತಿಗಾಗಿ ಕ್ವಾಡ್ ಕರೆ!

ಉಕ್ರೇನ್‌ನಲ್ಲಿ ಪರಮಾಣು ಶಸ್ತ್ರಾಸ್ತ್ರಗಳ ಬಳಕೆ ಅಥವಾ ಬೆದರಿಕೆಯನ್ನು 'ಸ್ವೀಕಾರಾರ್ಹವಲ್ಲ'. ಕ್ವಾಡ್ ವಿದೇಶಾಂಗ ಸಚಿವರು ಶಾಶ್ವತ ಶಾಂತಿಗಾಗಿ ಕರೆ ನೀಡಿದ್ದಾರೆ.
ಕ್ವಾಡ್ ಸದಸ್ಯ ರಾಷ್ಟ್ರಗಳು
ಕ್ವಾಡ್ ಸದಸ್ಯ ರಾಷ್ಟ್ರಗಳು
Updated on

ನವದೆಹಲಿ: ಉಕ್ರೇನ್‌ನಲ್ಲಿ ಪರಮಾಣು ಶಸ್ತ್ರಾಸ್ತ್ರಗಳ ಬಳಕೆ ಅಥವಾ ಬೆದರಿಕೆಯನ್ನು 'ಸ್ವೀಕಾರಾರ್ಹವಲ್ಲ'. ಕ್ವಾಡ್ ವಿದೇಶಾಂಗ ಸಚಿವರು ಶಾಶ್ವತ ಶಾಂತಿಗಾಗಿ ಕರೆ ನೀಡಿದ್ದಾರೆ. 

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್, ಜಪಾನ್ ವಿದೇಶಾಂಗ ಸಚಿವ ಯೋಶಿಮಾಸಾ ಹಯಾಶಿ ಮತ್ತು ಆಸ್ಟ್ರೇಲಿಯಾದ ಪೆನ್ನಿ ವಾಂಗ್ ನಡುವಿನ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಯಿತು. ಸಭೆಯ ಜಂಟಿ ಹೇಳಿಕೆಯಲ್ಲಿ ವಿದೇಶಾಂಗ ಮಂತ್ರಿಗಳು ಅಂತಾರಾಷ್ಟ್ರೀಯ ಕಾನೂನಿಗೆ ಅನುಸಾರವಾಗಿ ಉಕ್ರೇನ್‌ನಲ್ಲಿ ಸಮಗ್ರ, ನ್ಯಾಯಯುತ ಮತ್ತು ಶಾಶ್ವತವಾದ ಶಾಂತಿಯ ಅಗತ್ಯವನ್ನು ಒತ್ತಿ ಹೇಳಿದರು.

ನಾವು ಉಕ್ರೇನ್‌ನಲ್ಲಿನ ಸಂಘರ್ಷ ಮತ್ತು ಅದರಿಂದ ಉಂಟಾದ ಅಗಾಧವಾದ ಮಾನವೀಯ ಸಂಕಟಗಳಿಗೆ ನಮ್ಮ ಪ್ರತಿಕ್ರಿಯೆಗಳನ್ನು ಚರ್ಚಿಸುವುದನ್ನು ಮುಂದುವರಿಸುತ್ತೇವೆ ಮತ್ತು ಪರಮಾಣು ಶಸ್ತ್ರಾಸ್ತ್ರಗಳ ಬಳಕೆ ಅಥವಾ ಬೆದರಿಕೆಯನ್ನು ಸ್ವೀಕಾರಾರ್ಹವಲ್ಲ ಎಂದು ಒಪ್ಪಿಕೊಳ್ಳುತ್ತೇವೆ. ವಿಶ್ವಸಂಸ್ಥೆಯ ಚಾರ್ಟರ್ ಸೇರಿದಂತೆ ಅಂತರರಾಷ್ಟ್ರೀಯ ಕಾನೂನಿಗೆ ಅನುಸಾರವಾಗಿ ಉಕ್ರೇನ್‌ನಲ್ಲಿ ಸಮಗ್ರ, ನ್ಯಾಯಯುತ ಮತ್ತು ಶಾಶ್ವತವಾದ ಶಾಂತಿಯ ಅಗತ್ಯವನ್ನು ನಾವು ಒತ್ತಿಹೇಳಿದ್ದೇವೆ ವಿದೇಶಾಂಗ ಸಚಿವರು ಹೇಳಿದರು.

ಕ್ವಾಡ್‌ನ ವಿದೇಶಾಂಗ ಮಂತ್ರಿಗಳು ನಿಯಮಾಧಾರಿತ ಅಂತರರಾಷ್ಟ್ರೀಯ ಆದೇಶವು ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ, ಪಾರದರ್ಶಕತೆ ಮತ್ತು ವಿವಾದಗಳ ಶಾಂತಿಯುತ ಪರಿಹಾರವನ್ನು ಗೌರವಿಸಬೇಕು ಎಂದು ಒತ್ತಿ ಹೇಳಿದರು.

ಭಾರತವನ್ನು ಹೊರತುಪಡಿಸಿ, ಇತರ ಕ್ವಾಡ್ ಸದಸ್ಯ ರಾಷ್ಟ್ರಗಳಾದ ಅಮೆರಿಕಾ, ಜಪಾನ್ ಮತ್ತು ಆಸ್ಟ್ರೇಲಿಯಾಗಳು ರಷ್ಯಾದ ಉಕ್ರೇನ್ ಆಕ್ರಮಣವನ್ನು ಕಟುವಾಗಿ ಟೀಕಿಸಿವೆ. ಆಕ್ರಮಣಕ್ಕಾಗಿ ರಷ್ಯಾವನ್ನು ಶಿಕ್ಷಿಸಲು ಅಮೆರಿಕಾ ಪಾಶ್ಚಿಮಾತ್ಯ ಪ್ರಯತ್ನಗಳನ್ನು ಮುನ್ನಡೆಸುತ್ತಿದೆ. ರಷ್ಯಾ ಆಕ್ರಮಣವನ್ನು ಭಾರತ ಇನ್ನೂ ಖಂಡಿಸಿಲ್ಲ ಮತ್ತು ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಸಂಘರ್ಷ ಪರಿಹಾರವನ್ನು ಬೆಂಬಲಿಸುತ್ತಿದೆ ಎಂದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com