ನವದೆಹಲಿ: ಎಎಪಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ಗುರುವಾರ ದೆಹಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ದೆಹಲಿಯ ನಡೆದ ಸರಳ ಸಮಾರಂಭದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅತಿಶಿ ಹಾಗೂ ಸೌರಭ್ ಭಾರದ್ವಾಜ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ದೆಹಲಿ ವಿಧಾನಸಭೆ ಪ್ರತಿಪಕ್ಷ ನಾಯಕ ರಾಮವೀರ್ ಸಿಂಗ್ ಅವರ ಉಪಸ್ಥಿತರಿದ್ದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸಂಪುಟಕ್ಕೆ ಹೊಸದಾಗಿ ನೇಮಕಗೊಂಡ ಅತಿಶಿ ಅವರಿಗೆ ಶಿಕ್ಷಣ, ಲೋಕೋಪಯೋಗಿ, ವಿದ್ಯುತ್ ಮತ್ತು ಪ್ರವಾಸೋದ್ಯಮ ಖಾತೆಗಳನ್ನು ನೀಡಿದ್ದಾರೆ.
ಇದನ್ನು ಓದಿ: ದೆಹಲಿ ನೂತನ ಸಚಿವರಾಗಿ ಅತಿಶಿ, ಸೌರಭ್ ಭಾರದ್ವಾಜ್ ನೇಮಕ
ಇನ್ನು ಸೌರಭ್ ಭಾರದ್ವಾಜ್ ಅವರಿಗೆ ಆರೋಗ್ಯ, ನೀರು ಮತ್ತು ಕೈಗಾರಿಕೆ ಹಾಗೂ ನಗರಾಭಿವೃದ್ಧಿಯನ್ನು ಕೇಜ್ರಿವಾಲ್ ಅವರು ಹಂಚಿಕೆ ಮಾಡಿದ್ದಾರೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿಯ ಹಿರಿಯ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರಿಂದ ತೆರವಾದ ಸಚಿವ ಸ್ಥಾನಗಳನ್ನು ಈ ಇಬ್ಬರು ಶಾಸಕರಿಗೆ ನೀಡಲಾಗಿದೆ.
Advertisement