ಜೈಲಿಗೆ ಹಾಕಿ ತೊಂದರೆ ಕೊಡಬಹುದು ಆದರೆ, ನನ್ನ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ: ಮನೀಶ್ ಸಿಸೋಡಿಯಾ

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಿಂದ ಸಂದೇಶವನ್ನು ಕಳುಹಿಸಿದ್ದಾರೆ. ಜೈಲುವಾಸವು ಅವರಿಗೆ ತೊಂದರೆಗಳನ್ನು ಉಂಟುಮಾಡಬಹುದು. ಆದರೆ, ಅದು ಅವರ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ
Updated on

ನವದೆಹಲಿ: ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಿಂದ ಸಂದೇಶವನ್ನು ಕಳುಹಿಸಿದ್ದಾರೆ. ಜೈಲುವಾಸವು ಅವರಿಗೆ ತೊಂದರೆಗಳನ್ನು ಉಂಟುಮಾಡಬಹುದು. ಆದರೆ, ಅದು ಅವರ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

2021-22ರ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನನ್ನು ಫೆಬ್ರುವರಿ 26 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ.

ಈ ವಾರದ ಆರಂಭದಲ್ಲಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.

'ಸಾಹೇಬ್, ನೀವು ನನ್ನನ್ನು ಜೈಲಿಗೆ ಹಾಕುವ ಮೂಲಕ ನನಗೆ ತೊಂದರೆ ನೀಡಬಹುದು, ಆದರೆ ನೀವು ನನ್ನ ಉತ್ಸಾಹವನ್ನು ಮುರಿಯಲು ಸಾಧ್ಯವಿಲ್ಲ. ಬ್ರಿಟಿಷ್ ಆಡಳಿತಗಾರರು ಸಹ ಸ್ವಾತಂತ್ರ್ಯ ಹೋರಾಟಗಾರರಿಗೆ ತೊಂದರೆ ಉಂಟುಮಾಡಿದರು, ಆದರೆ, ಅವರ ಉತ್ಸಾಹವು ಎಂದಿಗೂ ಕುಗ್ಗಲಿಲ್ಲ- ಜೈಲಿನಿಂದ ಮನೀಶ್ ಸಿಸೋಡಿಯಾ ಅವರ ಸಂದೇಶ' ಎಂದು ಎಎಪಿ ನಾಯಕನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಹಿಂದಿಯಲ್ಲಿ ಟ್ವೀಟ್ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com