ಭಾರತ ಈಗಾಗಲೇ ಹಿಂದೂ ರಾಷ್ಟ್ರ, ಅದನ್ನು ಮತ್ತೆ ಹಿಂದೂ ರಾಷ್ಟ್ರವನ್ನಾಗಿ ಮಾಡುವ ಅಗತ್ಯವಿಲ್ಲ: ದತ್ತಾತ್ರೇಯ ಹೊಸಬಾಳೆ

ಭಾರತವು ಈಗಾಗಲೇ 'ಹಿಂದೂ ರಾಷ್ಟ್ರ'ವಾಗಿದ್ದು, ಇದು 'ಸಾಂಸ್ಕೃತಿಕ ಪರಿಕಲ್ಪನೆ' ಮತ್ತು ಇದನ್ನು ಸಂವಿಧಾನದ ಮೂಲಕ ಸ್ಥಾಪಿಸುವ ಅಗತ್ಯವಿಲ್ಲ ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮಂಗಳವಾರ ಇಲ್ಲಿ ಹೇಳಿದರು.
ದತ್ತಾತ್ರೇಯ ಹೊಸಬಾಳೆ
ದತ್ತಾತ್ರೇಯ ಹೊಸಬಾಳೆ

ಸಮಲ್ಖಾ (ಹರಿಯಾಣ): ಭಾರತವು ಈಗಾಗಲೇ 'ಹಿಂದೂ ರಾಷ್ಟ್ರ'ವಾಗಿದ್ದು, ಇದು 'ಸಾಂಸ್ಕೃತಿಕ ಪರಿಕಲ್ಪನೆ' ಮತ್ತು ಇದನ್ನು ಸಂವಿಧಾನದ ಮೂಲಕ ಸ್ಥಾಪಿಸುವ ಅಗತ್ಯವಿಲ್ಲ ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮಂಗಳವಾರ ಇಲ್ಲಿ ಹೇಳಿದರು.

ತಮ್ಮ ಹೇಳಿಕೆಯನ್ನು ವಿವರಿಸಿದ ಅವರು, ರಾಷ್ಟ್ರ ಮತ್ತು ರಾಜ್ಯ ಎರಡು ವಿಭಿನ್ನ ವಿಷಯಗಳು. ರಾಷ್ಟ್ರವು 'ಸಾಂಸ್ಕೃತಿಕ ಪರಿಕಲ್ಪನೆ' ಆಗಿದ್ದರೆ, ರಾಜ್ಯವು ಸಂವಿಧಾನದಿಂದ ಸ್ಥಾಪಿಸಲ್ಪಟ್ಟಿದೆ. ಅದು ರಾಜ್ಯ ಶಕ್ತಿ ಎಂದರು.

'ಹಿಂದೂ ರಾಷ್ಟ್ರದ ಬಗ್ಗೆ ನಾವು ಕಳೆದ 100 ವರ್ಷಗಳಿಂದ ಹೇಳುತ್ತಾ ಬಂದಿದ್ದೇವೆ. ಅದು ಸಾಂಸ್ಕೃತಿಕ ಪರಿಕಲ್ಪನೆ, ಸೈದ್ಧಾಂತಿಕವಲ್ಲ' ಎಂದು ಅವರು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

'ರಾಷ್ಟ್ರವು ಒಂದು ಸಾಂಸ್ಕೃತಿಕ ಪರಿಕಲ್ಪನೆಯಾಗಿದೆ. ಭಾರತವು ಈಗಾಗಲೇ ಹಿಂದೂ ರಾಷ್ಟ್ರವಾಗಿದೆ. ಅದನ್ನು ಮತ್ತೆ ಹಿಂದೂ ರಾಷ್ಟ್ರವನ್ನಾಗಿ ಮಾಡುವ ಅಗತ್ಯವಿಲ್ಲ' ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com