ಕೊಯಂಬತ್ತೂರು: ಕೋರ್ಟ್ ಆವರಣದಲ್ಲಿಯೇ ಪತ್ನಿ ಮೇಲೆ ಆ್ಯಸಿಡ್ ಎರಚಿದ ಪತಿ!

ನ್ಯಾಯಾಲಯದ ವಿಚಾರಣೆಗಾಗಿ ಕಾಯುತ್ತಿದ್ದ ಪತ್ನಿ ಮೇಲೆ ಪತಿಯೇ ಆ್ಯಸಿಡ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಏರ್ಪಟ್ಟಿತ್ತು.
ಘಟನೆ ನಡೆದ ಸ್ಥಳ
ಘಟನೆ ನಡೆದ ಸ್ಥಳ
Updated on

ಕೊಯಂಬತ್ತೂರು: ನ್ಯಾಯಾಲಯದ ವಿಚಾರಣೆಗಾಗಿ ಕಾಯುತ್ತಿದ್ದ ಪತ್ನಿ ಮೇಲೆ ಪತಿಯೇ ಆ್ಯಸಿಡ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಏರ್ಪಟ್ಟಿತ್ತು.

ಕೊಯಂಬತ್ತೂರಿನ ರಾಮನಾಥಪುರಂನ ಕಾವೇರಿ ನಗರದ 33 ವರ್ಷದ ಕವಿತಾ 2016 ರಲ್ಲಿ ಬಸ್ ಪ್ರಯಾಣಿಕರೊಬ್ಬರ ಚೈನ್ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿದ್ದಳು, ಜಾಮೀನಿನ ಮೇಲೆ ಹೊರಗಿದ್ದಳು. ಆಕೆ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಬರುತ್ತಿದ್ದಳು.

ಅವಳು ತನ್ನ ಇಬ್ಬರು ಮಕ್ಕಳು ಮತ್ತು ಅವಳ ಪತಿ ಶಿವನಿಂದ ದೂರವಾಗಿ ವಾಸಿಸುತ್ತಿದ್ದಳು, ಅವರೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದಳು. ಗುರುವಾರ, ಕವಿತಾ ಪ್ರಕರಣದ ವಿಚಾರಣೆಗಾಗಿ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್  ಅವರನ್ನು ಭೇಟಿ ಮಾಡಿದ್ದಳು, ಆಕೆಯನ್ನು ಹಿಂಬಾಲಿಸಿದ ಪತಿ ಶಿವ ಕೋರ್ಟ್ ಕಾರಿಡಾರ್‌ನಲ್ಲಿ ಕಾಯುತ್ತಿದ್ದಾಗ  ಇಬ್ಬರು ಜಗಳಕ್ಕಿಳಿದರು.

ಇಬ್ಬರ ನಡುವೆ ಜಗಳ ನಡೆಯುತ್ತಿದ್ದಾಗ ಶಿವ ತಾನು ಬಚ್ಚಿಟ್ಟಿದ್ದ ಪ್ಲಾಸ್ಟಿಕ್ ಬಾಟಲಿಯಿಂದ ಕವಿತಾ ಮೇಲೆ ಆಸಿಡ್ ಸುರಿದಿದ್ದಾನೆ. ಕವಿತಾ ಅವರಿಗೆ ಗಂಭೀರ ಗಾಯಗಳಾಗಿವೆ. ಅಲ್ಲಿದ್ದ ವಕೀಲರು ದಾಳಿಯನ್ನು ತಡೆಯಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಆಸಿಡ್ ಸೋರಿಕೆಯಿಂದಾಗಿ ವಕೀಲರೊಬ್ಬರಿಗೆ ಸಣ್ಣ ಸುಟ್ಟ ಗಾಯಗಳಾಗಿವೆ.

ಶಿವನನ್ನು ಥಳಿಸಿದ ವಕೀಲರು ಪೊಲೀಸರಿಗೆ ಒಪ್ಪಿಸಿದ್ದಾರೆ. ಕವಿತಾ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಕೊಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com