ಮಹಾರಾಷ್ಟ್ರ: 'ಎನ್ಕೌಂಟರ್ ಸ್ಪೆಷಲಿಸ್ಟ್' ದಯಾ ನಾಯಕ್ ATS ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾವಣೆ

ಮಹಾರಾಷ್ಟ್ರದ "ಎನ್‌ಕೌಂಟರ್ ಸ್ಪೆಷಲಿಸ್ಟ್" ಎಂದೇ ಖ್ಯಾತರಾಗಿರುವ ಕರ್ನಾಟಕ ಮೂಲದ ಇನ್ಸ್‌ಪೆಕ್ಟರ್ ದಯಾ ನಾಯಕ್ ಅವರನ್ನು ಸೋಮವಾರ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದಿಂದ ಮುಂಬೈ ಪೊಲೀಸರಿಗೆ ವರ್ಗಾಯಿಸಲಾಗಿದೆ.
ದಯಾನಾಯಕ್ ವರ್ಗಾವಣೆ
ದಯಾನಾಯಕ್ ವರ್ಗಾವಣೆ
Updated on

ಮುಂಬೈ: ಮಹಾರಾಷ್ಟ್ರದ "ಎನ್‌ಕೌಂಟರ್ ಸ್ಪೆಷಲಿಸ್ಟ್" ಎಂದೇ ಖ್ಯಾತರಾಗಿರುವ ಕರ್ನಾಟಕ ಮೂಲದ ಇನ್ಸ್‌ಪೆಕ್ಟರ್ ದಯಾ ನಾಯಕ್ ಅವರನ್ನು ಸೋಮವಾರ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದಿಂದ ಮುಂಬೈ ಪೊಲೀಸರಿಗೆ ವರ್ಗಾಯಿಸಲಾಗಿದೆ.

ದಯಾ ನಾಯಕ್ ಮತ್ತು ಇತರ ಏಳು ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೆ ಸಂಬಂಧಿಸಿದ ಆದೇಶವನ್ನು ಮಹಾರಾಷ್ಟ್ರ ಪೊಲೀಸ್‌ನ ಹೆಚ್ಚುವರಿ ಮಹಾನಿರ್ದೇಶಕರು (ಸ್ಥಾಪನೆ) ಹೊರಡಿಸಿದ್ದಾರೆ. ದಯಾ ನಾಯಕ್ ಅವರಲ್ಲದೆ, ಇನ್ಸ್‌ಪೆಕ್ಟರ್‌ಗಳಾದ ಜ್ಞಾನೇಶ್ವರ್ ವಾಘ್ ಮತ್ತು ದೌಲತ್ ಸಾಳ್ವೆ ಅವರನ್ನೂ ಎಟಿಎಸ್‌ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಟಿಎಸ್‌ನಲ್ಲಿದ್ದಾಗ, ದಯಾ ನಾಯಕ್ ಅವರು 2021 ರಲ್ಲಿ ಥಾಣೆ ಉದ್ಯಮಿ ಮನ್ಸುಖ್ ಹಿರಾನ್ ಅವರ ಹತ್ಯೆಯ ತನಿಖೆಯಲ್ಲಿ ಭಾಗಿಯಾಗಿದ್ದರು, ಅವರ ಹತ್ಯೆಯು ಮುಂಬೈನಲ್ಲಿರುವ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಮನೆ, ಆಂಟಿಲಿಯಾ ಬಳಿ ಸ್ಫೋಟಕ ತುಂಬಿದ ಕಾರನ್ನು ವಶಪಡಿಸಿಕೊಳ್ಳಲು ಸಂಬಂಧಿಸಿದ್ದಾಗಿದೆ.

ಆಂಟಿಲಿಯಾ ಬಾಂಬ್ ಸ್ಕೇರ್-ಹಿರಾನ್ ಕೊಲೆ ಪ್ರಕರಣದ ತನಿಖೆಯನ್ನು ನಂತರ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಲಾಗಿದ್ದರೂ, ಎಟಿಎಸ್ ಹೈ ಪ್ರೊಫೈಲ್ ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಲಾದ ಪೊಲೀಸರ ವಿರುದ್ಧ ಸಾಕ್ಷ್ಯವನ್ನು ಸಂಗ್ರಹಿಸಿತ್ತು. 

ದಯಾ ನಾಯಕ್, 1995-ಬ್ಯಾಚ್ ಪೊಲೀಸ್ ಇನ್ಸ್‌ಪೆಕ್ಟರ್, 1990 ರ ದಶಕದಲ್ಲಿ "ಎನ್‌ಕೌಂಟರ್ ಸ್ಪೆಷಲಿಸ್ಟ್" ಆಗಿ ಖ್ಯಾತಿಗೆ ಏರಿದರು. ಮುಂಬೈನಲ್ಲಿ ಭೂಗತ ಚಟುವಟಿಕೆಗಳು ಉತ್ತುಂಗದಲ್ಲಿದ್ದಾಗ 80 ಕ್ಕೂ ಹೆಚ್ಚು ದರೋಡೆಕೋರರನ್ನು ಎನ್ಕೌಂಟರ್ ನಲ್ಲಿ ಹೊಡೆದುರುಳಿಸಿದ್ದಾರೆ ಎಂದು ಹೇಳಲಾಗುತ್ತದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com