ಮಧ್ಯಪ್ರದೇಶ: ಇಂದೋರ್ ನಲ್ಲಿ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು 14 ಮಂದಿ ಸಾವು!

ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದ್ದು, ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದಾರೆ. 
ಮಧ್ಯಪ್ರದೇಶದಲ್ಲಿ ಬಾವಿ ಕುಸಿತದ ಘಟನೆ ನಡೆದ ಸ್ಥಳ
ಮಧ್ಯಪ್ರದೇಶದಲ್ಲಿ ಬಾವಿ ಕುಸಿತದ ಘಟನೆ ನಡೆದ ಸ್ಥಳ

ಮಧ್ಯಪ್ರದೇಶ: ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದ್ದು, ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದ ಪರಿಣಾಮ 14 ಮಂದಿ ಸಾವನ್ನಪ್ಪಿದ್ದಾರೆ. 

ರಾಮನವಮಿ ಅಂಗವಾಗಿ ಹೆಚ್ಚಿನ ಜನ ಸೇರಿದ್ದ್ ಅಹಿನ್ನೆಲೆಯಲ್ಲಿ ಬಾವಿಯ ಮೇಲ್ಭಾಗ ಕುಸಿದಿದೆ. ಈ ಭಾಗದಲ್ಲಿ ದೇವಾಲಯವಿತ್ತು. 

ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಗಳಿವೆ.

40 ಅಡಿ ಆಳದ ಬಾವಿ ಇದಾಗಿದ್ದು, ಈ ವರೆಗಿನ ಮಾಹಿತಿಯ ಪ್ರಕಾರ, 18 ಮಂದಿ ಭಕ್ತಾದಿಗಳು ಬಾವಿಯ ಒಳಗೆ ಸಿಲುಕಿಕೊಂಡಿರುವ ಸಾಧ್ಯತೆಗಳಿವೆ.

"ಇದೊಂದು ದುರದೃಷ್ಟಕರ ಘಟನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಜನರನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com